ಬೆಂಗಳೂರು: ಕಳಸಾ-ಬಂಡೂರಿ ಯೋಜನೆಗೆ ಶೀಘ್ರದಲ್ಲೇ ಅನುಮತಿ ನೀಡುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ-ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಬೇಕು.
ಈ ಬಗ್ಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರು, ಮಂಡಳಿಯ ಅಧ್ಯಕ್ಷರಾಗಿರುವ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ, ಯೋಜನೆಯ ಬಗ್ಗೆ ಸವಿವರವಾಗಿ ಬರೆದಿದ್ದಾರೆ.
ನೀವು ಅಧ್ಯಕ್ಷರಾಗಿರುವ ವನ್ಯಜೀವಿ ರಾಷ್ಟ್ರೀಯ ಮಂಡಳಿಯು ಯೋಜನೆಗೆ ಅಗತ್ಯ ಅನುಮತಿಯನ್ನು ನೀಡಿಲ್ಲ. ಗೋವಾದ ಮುಖ್ಯ ವನ್ಯಜೀವಿ ವಾರ್ಡನ್ ಕಳಸಾ ಬಂಡೂರಿನಲ್ಲಿ ಕರ್ನಾಟಕ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳದಂತೆ ಕಾನೂನು ಬಾಹಿರ ಆದೇಶ ಹೊರಡಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಆದ್ದರಿಂದ ಆದಷ್ಟು ಬೇಗ ಈ ಯೋಜನೆಗೆ ಅನುಮತಿ ನೀಡಿ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…