ರಾಜ್ಯ

ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಇಂದು ಕಿವಿಮಾತು ಹೇಳಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡುವ ಸಂದರ್ಭದಲ್ಲಿ ರೈತರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ, ರೈತರಿಗೆ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದಾಗ ಮಧ್ಯ ಪ್ರವೇಶ ಮಾಡಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ ಅವರು ಕಳೆದ ಸಾಲಿನಲ್ಲಿ 38 ಲಕ್ಷ ರೈತರಿಗೆ ಪರಿಹಾರವನ್ನು ನೀಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ಕೊಟ್ಟೂ ಕೂಡ ಇಲ್ಲಿಯವರೆಗೂ ಒಂದು ಪೈಸೆ ಹಣ ಬಿಡುಗಡೆಯಾಗಿಲ್ಲ. 2245 ಕೋಟಿ ರೈತರಿಗೆ ಪರಿಹಾರ ನೀಡಲಾಗಿದೆ ಎಂದರು ಉತ್ತರ ನೀಡಿದರು.

ಇದನ್ನೂ ಓದಿ:  ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಿ

ಈ ಬಗ್ಗೆ ಆಡಳಿತ ಮತ್ತು ವಿರೋಧ ಪಕ್ಷದವರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ಉಂಟಾಗಿ ಸದನವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.

ಸದನ ಮತ್ತೆ ಸೇರಿದಾಗ ಮಾತನಾಡಿದ ಮುಖ್ಯಮಂತ್ರಿಗಳು, ನಂತರ ವಿರೋಧ ಪಕ್ಷದ ನಾಯಕರು ಅಥವಾ ಸಭಾ ನಾಯಕರು ಮಾತನಾಡುವಾಗ ಮಧ್ಯೆ ಮಾತನಾಡುವುದು ಸರಿಯಲ್ಲ. ವಿಧಾನಮಂಡಲದಲ್ಲಿ ಗುಣಾತ್ಮಕ ಚರ್ಚೆಗಳು ಕಡಿಮೆಯಾಗುತ್ತಿರುವ ಬಗ್ಗೆ ಈಗಾಗಲೇ ಸಾರ್ವಜನಿಕರಲ್ಲಿ ಅಸಮಾಧಾನವಿದೆ. ಸಂವಿಧಾನಾತ್ಮಕವಾಗಿ ಮಾತನಾಡುವಾಗ ಅಡ್ಡಿಪಡಿಸಬಾರದು. ವಿರೋಧ ಪಕ್ಷದವರು ಮಾತನಾಡುವಾಗ ಸುಮ್ಮ ಸುಮ್ಮನೆ ಅಡ್ಡಿಪಡಿಸಬಾರದು. ವಿರೋಧ ಪಕ್ಷದ ನಾಯಕರು ಮಣಿದಾಗ ಮಾತ್ರ ಮಾತನಾಡಬೇಕು. ಯಾರೇ ಆದರೂ ಚರ್ಚೆಗೆ ಅಡ್ಡಿಪಡಿಸಬಾರದು ಎಂದರು.

ಆಂದೋಲನ ಡೆಸ್ಕ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

3 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

3 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

6 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

6 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

6 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

6 hours ago