ರಾಜ್ಯ

ಸಿಎಂ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್:‌ ಹೋಂ ಮಿನಿಸ್ಟರ್‌ ಹೇಳಿದ್ದಿಷ್ಟು.!

ಬೆಂಗಳೂರು: ಹೈಕಮಾಂಡ್ ಯಾರನ್ನೇ ಮುಖ್ಯಮಂತ್ರಿ ಮಾಡಿದ್ದರೂ ನಾವೆಲ್ಲಾ ಅವರಿಗೆ ಜೈ ಎನ್ನುತ್ತೇವೆ. ಸದ್ಯಕ್ಕೆ ಮುಖ್ಯಮಂತ್ರಿಯ ಹುದ್ದೆಯ ಸ್ಪರ್ಧೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮೊದಲ ಸ್ಥಾನದಲ್ಲಿದ್ದಾರೆ, ನಾವು ಎರಡನೇ ಸ್ಥಾನದಲ್ಲಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಅಧಿಕಾರಕ್ಕೆ ಬಂದಾಗ ಶಾಸಕರ ಅಭಿಪ್ರಾಯ ಪಡೆದು, ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಯಾರಿಗೆ ಹೆಚ್ಚಿನ ಬೆಂಬಲವಿದೆಯೋ ಅವರು ಮುಖ್ಯಮಂತ್ರಿಯಾಗುತ್ತಾರೆ. ಎಸ್.ಎಂ ಕೃಷ್ಣ, ಸಿದ್ದರಾಮಯ್ಯ ಅವರನ್ನು ಇದೇ ರೀತಿ ಆಯ್ಕೆ ಮಾಡಲಾಗಿದೆ ಎಂದರು.

ಇದನ್ನು ಓದಿ : ಆರ್‌ಎಸ್‌ಎಸ್‌ ಬ್ಯಾನ್‌ ಅಂತಾ ನಾನು ಹೇಳಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ

ಒಂದು ವೇಳೆ ಶಾಸಕರ ಅಭಿಪ್ರಾಯ ಪಡೆಯುವುದಿಲ್ಲ, ನೇರವಾಗಿ ಮುಖ್ಯಮಂತ್ರಿ ಮಾಡುತ್ತೇವೆ ಎಂದರೆ ಹೈಕಮಾಂಡ್‍ನ ತೀರ್ಮಾನಕ್ಕೆ ನಾವು ಬದ್ದರಾಗಿರುತ್ತೇವೆ. ಯಾರನ್ನೇ ಮುಖ್ಯಮಂತ್ರಿ ಮಾಡಿದರೂ ಒಪ್ಪಿಕೊಳ್ಳುತ್ತೇವೆ.

ಮುಖ್ಯಮಂತ್ರಿ ಹುದ್ದೆ ರೇಸಿನಲ್ಲಿ ನಾನು ಎರಡನೇ ಸ್ಥಾನದಲ್ಲಿದ್ದೇನೆ. ನಾನೇಕೆ ಮುಖ್ಯಮಂತ್ರಿಯಾಗಬಾರದು ಎಂದು ಸಹಜವಾಗಿ ಕೇಳಿದ್ದೇನೆ. ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿಯಾಗಲು ಬಹಳಷ್ಟು ಮಂದಿ ಆಕಾಂಕ್ಷಿಗಳು ಇದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ಅವರ ಮನೆಯಲ್ಲಿ ಔತಣಕೂಟ ಆಯೋಜಿಸಿದ್ದಾರೆ. 6 ತಿಂಗಳಿಗೊಮ್ಮೆ, 3 ತಿಂಗಳಿಗೊಮ್ಮೆ ಅಥವಾ ಅಧಿವೇಶನದ ವೇಳೆ ಊಟಕ್ಕೆ ಕರೆಯುವುದು ಸಂಪ್ರದಾಯವಾಗಿದೆ. ಇದೇನು ದೊಡ್ಡ ವಿಷಯವಲ್ಲ. ಅಧಿಕಾರ ಹಂಚಿಕೆ ಅಥವಾ ಸರ್ಕಾರಕ್ಕೆ ಎರಡೂವರೆ ವರ್ಷ ಆಗಿರುವ ಹಿನ್ನೆಲೆಯಲ್ಲಿ ಔತಣಕೂಟ ಆಯೋಜಿಸಲಾಗಿದೆ ಎಂಬುದು ಸರಿಯಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

26 mins ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

43 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

57 mins ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

1 hour ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

1 hour ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

2 hours ago