ರಾಜ್ಯ

ಸಿಎಂ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್:‌ ಹೋಂ ಮಿನಿಸ್ಟರ್‌ ಹೇಳಿದ್ದಿಷ್ಟು.!

ಬೆಂಗಳೂರು: ಹೈಕಮಾಂಡ್ ಯಾರನ್ನೇ ಮುಖ್ಯಮಂತ್ರಿ ಮಾಡಿದ್ದರೂ ನಾವೆಲ್ಲಾ ಅವರಿಗೆ ಜೈ ಎನ್ನುತ್ತೇವೆ. ಸದ್ಯಕ್ಕೆ ಮುಖ್ಯಮಂತ್ರಿಯ ಹುದ್ದೆಯ ಸ್ಪರ್ಧೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮೊದಲ ಸ್ಥಾನದಲ್ಲಿದ್ದಾರೆ, ನಾವು ಎರಡನೇ ಸ್ಥಾನದಲ್ಲಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಅಧಿಕಾರಕ್ಕೆ ಬಂದಾಗ ಶಾಸಕರ ಅಭಿಪ್ರಾಯ ಪಡೆದು, ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಯಾರಿಗೆ ಹೆಚ್ಚಿನ ಬೆಂಬಲವಿದೆಯೋ ಅವರು ಮುಖ್ಯಮಂತ್ರಿಯಾಗುತ್ತಾರೆ. ಎಸ್.ಎಂ ಕೃಷ್ಣ, ಸಿದ್ದರಾಮಯ್ಯ ಅವರನ್ನು ಇದೇ ರೀತಿ ಆಯ್ಕೆ ಮಾಡಲಾಗಿದೆ ಎಂದರು.

ಇದನ್ನು ಓದಿ : ಆರ್‌ಎಸ್‌ಎಸ್‌ ಬ್ಯಾನ್‌ ಅಂತಾ ನಾನು ಹೇಳಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ

ಒಂದು ವೇಳೆ ಶಾಸಕರ ಅಭಿಪ್ರಾಯ ಪಡೆಯುವುದಿಲ್ಲ, ನೇರವಾಗಿ ಮುಖ್ಯಮಂತ್ರಿ ಮಾಡುತ್ತೇವೆ ಎಂದರೆ ಹೈಕಮಾಂಡ್‍ನ ತೀರ್ಮಾನಕ್ಕೆ ನಾವು ಬದ್ದರಾಗಿರುತ್ತೇವೆ. ಯಾರನ್ನೇ ಮುಖ್ಯಮಂತ್ರಿ ಮಾಡಿದರೂ ಒಪ್ಪಿಕೊಳ್ಳುತ್ತೇವೆ.

ಮುಖ್ಯಮಂತ್ರಿ ಹುದ್ದೆ ರೇಸಿನಲ್ಲಿ ನಾನು ಎರಡನೇ ಸ್ಥಾನದಲ್ಲಿದ್ದೇನೆ. ನಾನೇಕೆ ಮುಖ್ಯಮಂತ್ರಿಯಾಗಬಾರದು ಎಂದು ಸಹಜವಾಗಿ ಕೇಳಿದ್ದೇನೆ. ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿಯಾಗಲು ಬಹಳಷ್ಟು ಮಂದಿ ಆಕಾಂಕ್ಷಿಗಳು ಇದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ಅವರ ಮನೆಯಲ್ಲಿ ಔತಣಕೂಟ ಆಯೋಜಿಸಿದ್ದಾರೆ. 6 ತಿಂಗಳಿಗೊಮ್ಮೆ, 3 ತಿಂಗಳಿಗೊಮ್ಮೆ ಅಥವಾ ಅಧಿವೇಶನದ ವೇಳೆ ಊಟಕ್ಕೆ ಕರೆಯುವುದು ಸಂಪ್ರದಾಯವಾಗಿದೆ. ಇದೇನು ದೊಡ್ಡ ವಿಷಯವಲ್ಲ. ಅಧಿಕಾರ ಹಂಚಿಕೆ ಅಥವಾ ಸರ್ಕಾರಕ್ಕೆ ಎರಡೂವರೆ ವರ್ಷ ಆಗಿರುವ ಹಿನ್ನೆಲೆಯಲ್ಲಿ ಔತಣಕೂಟ ಆಯೋಜಿಸಲಾಗಿದೆ ಎಂಬುದು ಸರಿಯಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

12 mins ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

18 mins ago

ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರಿಂದ ಮಹಾಮೇಳಾವ್:‌ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…

29 mins ago

ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರು

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ…

1 hour ago

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…

1 hour ago

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

2 hours ago