Mysore
21
broken clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗದೇ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಸಂಜೆ ನಿಗದಿಯಾಗಿದ್ದ ಯಾವುದೇ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಶಾಸಕರು, ಸಚಿವರುಗಳು ಸರ್ಕ್ಯೂಟ್ ಹೌಸ್​​ಗೆ ದೌಡಾಯಿಸಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ. ಬುಧವಾರ ಮಧ್ಯಾಹ್ನದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಅವರು ಅಧಿವೇಶನಕ್ಕೆ ಹೋಗದೆ ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಸಂಜೆಯವರೆಗೆ ನಿಗದಿಯಾಗಿದ್ದ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕ್ಯೂಟ್ ಹೌಸ್‌ಗೆ ಧಾವಿಸಿ ತಂದೆಯ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನೂ ಓದಿ:-ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ತಂದೆ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ತಂದೆಯವರ ಆರೋಗ್ಯ ಚೆನ್ನಾಗಿದೆ. ಗ್ಯಾಸ್ಟ್ರೋಕೇಷನ್ ಇನ್ಫೆಕ್ಸನ್ ಆಗಿದೆ. ಡೈರಿಯಾ ಸಮಸ್ಯೆ ತರ ಆಗಿದೆ. ವೈದ್ಯರು ತಪಾಸಣೆ ಮಾಡಿ ಮಾತ್ರೆಗಳನ್ನು ಕೊಟ್ಟಿದ್ದು, ಸದ್ಯ ವಿಶ್ರಾಂತಿ ಪಡೆಯುತ್ತಿದ್ದು, ನಾಳೆ ಅಧಿವೇಶನಕ್ಕೆ ಬರ್ತಾರೆ ಎಂದ ಸ್ಪಷ್ಟಪಡಿಸಿದರು.

Tags:
error: Content is protected !!