ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗದೇ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಸಂಜೆ ನಿಗದಿಯಾಗಿದ್ದ ಯಾವುದೇ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಶಾಸಕರು, ಸಚಿವರುಗಳು ಸರ್ಕ್ಯೂಟ್ ಹೌಸ್ಗೆ ದೌಡಾಯಿಸಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ. ಬುಧವಾರ ಮಧ್ಯಾಹ್ನದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಅವರು ಅಧಿವೇಶನಕ್ಕೆ ಹೋಗದೆ ಸರ್ಕ್ಯೂಟ್ ಹೌಸ್ನಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಸಂಜೆಯವರೆಗೆ ನಿಗದಿಯಾಗಿದ್ದ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕ್ಯೂಟ್ ಹೌಸ್ಗೆ ಧಾವಿಸಿ ತಂದೆಯ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ:-ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ
ತಂದೆ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ತಂದೆಯವರ ಆರೋಗ್ಯ ಚೆನ್ನಾಗಿದೆ. ಗ್ಯಾಸ್ಟ್ರೋಕೇಷನ್ ಇನ್ಫೆಕ್ಸನ್ ಆಗಿದೆ. ಡೈರಿಯಾ ಸಮಸ್ಯೆ ತರ ಆಗಿದೆ. ವೈದ್ಯರು ತಪಾಸಣೆ ಮಾಡಿ ಮಾತ್ರೆಗಳನ್ನು ಕೊಟ್ಟಿದ್ದು, ಸದ್ಯ ವಿಶ್ರಾಂತಿ ಪಡೆಯುತ್ತಿದ್ದು, ನಾಳೆ ಅಧಿವೇಶನಕ್ಕೆ ಬರ್ತಾರೆ ಎಂದ ಸ್ಪಷ್ಟಪಡಿಸಿದರು.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…