ರಾಜ್ಯ

ಸಿಎಂ ಸಿದ್ದರಾಮಯ್ಯ ದಿಡೀರ್ ದಿಲ್ಲಿ ಪ್ರವಾಸ

ಬೆಂಗಳೂರು : ಸಚಿವ ಸಂಪುಟ ಸಭೆಯ ಬಳಿಕ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಲ್ಲಿ ಪ್ರವಾಸ ಕೈಗೊಂಡ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದು ಗೊಳಿಸಿ ಸಾರ್ವಜನಿಕರ ಭೇಟಿಯಿಂದಲೂ ಹಿಂದೆ ಸರಿದಿದ್ದು ಚರ್ಚೆಗೆ ಗ್ರಾಸವಾಗಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ದಿಲ್ಲಿಯಲ್ಲಿ ಇಂಡಿಯಾ ರಾಜಕೀಯ ಒಕ್ಕೂಟದ ಮುಖಂಡರಿಗೆ ಔತಣಕೂಟ ಆಯೋಜಿಸಿದ್ದರು. ಈ ಔತಣಕೂಟಕ್ಕೆ ರಾಹುಲ್‌ಗಾಂಧಿ ಖುದ್ದು ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು, ಸಚಿವ ಸಂಪುಟ ಸಭೆಯ ಬಳಿಕ ದಿಲ್ಲಿಗೆ ತೆರಳಿದರು. ಡಿ.ಕೆ. ಶಿವಕುಮಾರ್ ಅವರಿಗೆ ಔತಣಕೂಟಕ್ಕೆ ಆಹ್ವಾನವಿಲ್ಲದೇ ಇರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಶುಕ್ರವಾರ ಬೆಂಗಳೂರಿನಲ್ಲಿ ನಡೆಯುವ ಮತಗಳ್ಳತನದ ವಿರುದ್ಧ, ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಅದರ ಕುರಿತು ಇಂಡಿಯಾ ಕೂಟದ ಮುಖಂಡರಿಗೆ ರಾಹುಲ್‌ಗಾಂಧಿ ಮಾಹಿತಿ ನೀಡಲಿದ್ದಾರೆ.

ರಾಹುಲ್‌ಗಾಂಧಿ ಅವರ ಪ್ರತಿಭಟನೆಯ ಪೂರ್ವ ತಯಾರಿಯ ಬಗ್ಗೆ ಡಿ.ಕೆ. ಶಿವಕುಮಾರ್ ಅವರು ಅತೀವ ಕಾಳಜಿ ವಹಿಸಿದ್ದು, ಯಾವುದೇ ಲೋಪಗಳಾಗಬಾರದು ಎಂಬ ಕಾರಣಕ್ಕೆ ಪದೇ-ಪದೇ ಸ್ಥಳ ಪರಿಶೀಲನೆ ನಡೆಸುವ ಮೂಲಕ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ.

ಅನಾರೋಗ್ಯದ ನಡುವೆಯೂ ಡಿ.ಕೆ.ಶಿವಕುಮಾರ್ ಅವರ ಪಕ್ಷದ ಬದ್ಧತೆ ಸಾರ್ವಜನಿಕ ವಲಯದಲ್ಲಿ ಪ್ರಸಂಶೆಗೆ ಪಾತ್ರವಾಗಿದೆ. ಪ್ರತಿಭಟನೆಯ ಪೂರ್ವ ತಯಾರಿ ನಡುವೆಯು ಕೂಡ ಗುರುವಾರ ಮಧ್ಯಾಹ್ನ ಡಿ.ಕೆ. ಶಿವಕುಮಾರ್ ತೆಲಂಗಾಣ ರಾಜ್ಯ ಪ್ರವಾಸಕ್ಕಾಗಿ ಹೈದರಾಬಾದ್‌ಗೆ ತೆರಳಬೇಕಿತ್ತು. ಆದರೆ ಬೆಳಿಗ್ಗೆ ಇದ್ದಕ್ಕಿಂದ್ದಂತೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ನಾನು ಸಕ್ರಿಯನಾಗಿರುವುದರಿಂದ ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇಂದಿನಿಂದ ಆ. 10ರ ವರೆಗೂ ಯಾರನ್ನೂ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಯಾರೂ ತಪ್ಪು ತಿಳಿಯಬಾರದು ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

9 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

9 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

9 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

10 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

10 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

11 hours ago