ರಾಜ್ಯ

ಸಿಎಂ ಸಿದ್ದರಾಮಯ್ಯ ದಿಡೀರ್ ದಿಲ್ಲಿ ಪ್ರವಾಸ

ಬೆಂಗಳೂರು : ಸಚಿವ ಸಂಪುಟ ಸಭೆಯ ಬಳಿಕ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಲ್ಲಿ ಪ್ರವಾಸ ಕೈಗೊಂಡ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದು ಗೊಳಿಸಿ ಸಾರ್ವಜನಿಕರ ಭೇಟಿಯಿಂದಲೂ ಹಿಂದೆ ಸರಿದಿದ್ದು ಚರ್ಚೆಗೆ ಗ್ರಾಸವಾಗಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ದಿಲ್ಲಿಯಲ್ಲಿ ಇಂಡಿಯಾ ರಾಜಕೀಯ ಒಕ್ಕೂಟದ ಮುಖಂಡರಿಗೆ ಔತಣಕೂಟ ಆಯೋಜಿಸಿದ್ದರು. ಈ ಔತಣಕೂಟಕ್ಕೆ ರಾಹುಲ್‌ಗಾಂಧಿ ಖುದ್ದು ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು, ಸಚಿವ ಸಂಪುಟ ಸಭೆಯ ಬಳಿಕ ದಿಲ್ಲಿಗೆ ತೆರಳಿದರು. ಡಿ.ಕೆ. ಶಿವಕುಮಾರ್ ಅವರಿಗೆ ಔತಣಕೂಟಕ್ಕೆ ಆಹ್ವಾನವಿಲ್ಲದೇ ಇರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಶುಕ್ರವಾರ ಬೆಂಗಳೂರಿನಲ್ಲಿ ನಡೆಯುವ ಮತಗಳ್ಳತನದ ವಿರುದ್ಧ, ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಅದರ ಕುರಿತು ಇಂಡಿಯಾ ಕೂಟದ ಮುಖಂಡರಿಗೆ ರಾಹುಲ್‌ಗಾಂಧಿ ಮಾಹಿತಿ ನೀಡಲಿದ್ದಾರೆ.

ರಾಹುಲ್‌ಗಾಂಧಿ ಅವರ ಪ್ರತಿಭಟನೆಯ ಪೂರ್ವ ತಯಾರಿಯ ಬಗ್ಗೆ ಡಿ.ಕೆ. ಶಿವಕುಮಾರ್ ಅವರು ಅತೀವ ಕಾಳಜಿ ವಹಿಸಿದ್ದು, ಯಾವುದೇ ಲೋಪಗಳಾಗಬಾರದು ಎಂಬ ಕಾರಣಕ್ಕೆ ಪದೇ-ಪದೇ ಸ್ಥಳ ಪರಿಶೀಲನೆ ನಡೆಸುವ ಮೂಲಕ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ.

ಅನಾರೋಗ್ಯದ ನಡುವೆಯೂ ಡಿ.ಕೆ.ಶಿವಕುಮಾರ್ ಅವರ ಪಕ್ಷದ ಬದ್ಧತೆ ಸಾರ್ವಜನಿಕ ವಲಯದಲ್ಲಿ ಪ್ರಸಂಶೆಗೆ ಪಾತ್ರವಾಗಿದೆ. ಪ್ರತಿಭಟನೆಯ ಪೂರ್ವ ತಯಾರಿ ನಡುವೆಯು ಕೂಡ ಗುರುವಾರ ಮಧ್ಯಾಹ್ನ ಡಿ.ಕೆ. ಶಿವಕುಮಾರ್ ತೆಲಂಗಾಣ ರಾಜ್ಯ ಪ್ರವಾಸಕ್ಕಾಗಿ ಹೈದರಾಬಾದ್‌ಗೆ ತೆರಳಬೇಕಿತ್ತು. ಆದರೆ ಬೆಳಿಗ್ಗೆ ಇದ್ದಕ್ಕಿಂದ್ದಂತೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ನಾನು ಸಕ್ರಿಯನಾಗಿರುವುದರಿಂದ ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇಂದಿನಿಂದ ಆ. 10ರ ವರೆಗೂ ಯಾರನ್ನೂ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಯಾರೂ ತಪ್ಪು ತಿಳಿಯಬಾರದು ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

10 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

11 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

12 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

13 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

13 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

20 hours ago