ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸುವ ಕೆಲಸ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಹಿಟ್ಲರ್ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ನಾವು ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬಂದವರು, ಈಗಲೂ ನ್ಯಾಯಕ್ಕಾಗಿ ಹೋರಾಟ ಮುಂದುವರಿಸುತ್ತೇವೆ.
ಹೀಗಿರುವಾಗ ಸರ್ಕಾರ ದ್ವೇಷದ ರಾಜಕಾರಣ ಮಾಡುವುದು ಬೇಡ. ಪೊಲೀಸರು ನಮ್ಮನ್ನು ಬಂಧಿಸಬಹುದು. ಆದರೂ ನಮ್ಮ ಹೋರಾಟ ನಿಲ್ಲಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ಒಂದು ಸಮುದಾಯ ಓಲೈಕೆ ಮಾಡಲು ಕಾಂಗ್ರೆಸ್ನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕರ್ನಾಟಕವನ್ನು ಬಾಂಗ್ಲಾದೇಶ ಮಾಡುತ್ತೇವೆ ಎಂದು ಹೇಳುವವರ ವಿರುದ್ಧ ಕೇಸ್ ಹಾಕಿಲ್ಲ. ಪಾಕ್ ಪರ ಘೋಷಣೆ ಕೂಗಿರುವ ವಿಡಿಯೋವನ್ನೇ ನಾನು ಟ್ವೀಟ್ನಲ್ಲಿ ಹಾಕಿರುವುದು. ಅದಕ್ಕೆ ನನ್ನ ಮೇಲೆ ಎಫ್ಐಆರ್ ದಾಖಲು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…
ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ …
ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …
ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ ಪೈಪ್ಗಳನ್ನು ಅಳವಡಿಸಲು ರಸ್ತೆಯನ್ನು ಅಗೆಯಲಾಗಿತ್ತು. ಪೈಪ್ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…