ರಾಜ್ಯ

ಪೂರ್ಣಾವಧಿಯವರೆಗೂ ನಾನೇ ಸಿಎಂ ಆಗಿರುತ್ತೇನೆ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಚುನಾವಣೆವರೆಗೂ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಚುನಾವಣೆಯಲ್ಲಿಯೂ ನಮ್ಮದೇ ಸರ್ಕಾರ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌12) ಕಾಂಗ್ರೆಸ್‌ ಕಾರ್ಯಕರ್ತರಿಗೆ ವೇತನ ನೀಡುವ ಕುರಿತು ವಿಪಕ್ಷಗಳು ಚರ್ಚಿಸುವ ವೇಳೆ ಆರ್‌.ಅಶೋಕ್‌ ಅವರ ಹೇಳಿಕೆ ತಿರುಗೇಟು ನೀಡಿದ ಸಿಎಂ, 5 ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಮುಂದಿನ ಐದು ವರ್ಷಗಳು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಟಾಂಗ್‌ ನೀಡಿದ್ದಾರೆ.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಚಿಸಿ ಅದಕ್ಕೆ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸಿ, ಅವರಿಗೆ ಸರ್ಕಾರದಿಂದ ವೇತನ ನೀಡುತ್ತಿರುವುದಕ್ಕೆ ವಿಪಕ್ಷಗಳಿಂದ ಆಕ್ಷೇಪ, ವಿರೋಧ ವ್ಯಕ್ತವಾದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ಅವರು, ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದು ಹೇಳಿದರು.

ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇನ್ನೂ ಮಹಾರಾಷ್ಟ್ರದಲ್ಲಿ ಎಲ್ಲಾ ಶಾಸಕರ ಕಚೇರಿಗೂ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ನೇಮಿಸಿಕೊಳ್ಳುತ್ತಿದೆ, ಅಂತೆಯೇ ಇಲ್ಲಿಯೂ ನೇಮಿಸಲಾಗಿದೆ. ಆದರೆ ಅವರಿಂದ ಯಾವುದೇ ತಾಲ್ಲೂಕುಗಳಲ್ಲೂ ಶಾಸಕರ ಘನತೆಗೆ ಮತ್ತು ಅಧಿಕಾರಕ್ಕೆ ಯಾವುದೇ ಚ್ಯುತಿ ಬರುವುದಿಲ್ಲ ಎಂದರು.

ಇನ್ನು ಹಣ ದುರುಪಯೋಗ ಆಗುತ್ತದೆ ಎಂಬ ಪ್ರಶ್ನೆ ಇಲ್ಲ. ನಾವು ಶಾಸಕ, ಎಂಎಲ್​​ಸಿಗಳ ಹಕ್ಕು ಮೊಟಕು ಮಾಡಿಲ್ಲ. ಶಾಸಕರಿಗೆ ಅಗೌರವ ಮಾಡುವ ಕೆಲಸ ಆಗಲ್ಲ. ಸ್ವತ: ನಾನೂ ಕೂಡ ಶಾಸಕ ಎಂದು ಉತ್ತರಿಸಿದ್ದಾರೆ. ಅಲ್ಲದೇ ಮಹಾರಾಷ್ಟ್ರದಲ್ಲಿ ಆರ್​ಎಸ್​ಎಸ್ ಕಾರ್ಯಕರ್ತರನ್ನು ಪಿಎಗಳಾಗಿ ಮಾಡಿಲ್ವಾ? ಎಂದು ತಿರುಗೇಟು ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೈಸೂರಿನ ಕುವೆಂಪು ಮನೆ ಇನ್ಮುಂದೆ ಸ್ಮಾರಕ : ಸರ್ಕಾರದ ಘೋಷಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…

55 mins ago

ಬೆಳೆ ವಿಮೆ ಪರಿಹಾರ ಸುಧಾರಣೆ : ಅದೇ ಹಂಗಾಮಿನಲ್ಲೇ ವಿತರಣೆಗೆ ಕ್ರಮ ; ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ…

1 hour ago

ವಾಜಮಂಗಲ ಬಳಿ ಘರ್ಜಿಸಿದ ಜೆಸಿಬಿ : ಅನಧಿಕೃತ ಕಟ್ಟಡ ನೆಲಸಮ ಮಾಡಿದ ಎಂಡಿಎ

ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ…

2 hours ago

ಮುಡಾ ಪ್ರಕರಣದಲ್ಲಿ ಸಿಎಂʼಗೆ ಬಿಗ್‌ ರಿಲೀಫ್‌ : ಬಿ ರಿಪೋರ್ಟ್‌ ಎತ್ತಿ ಹಿಡಿದ ಕೋರ್ಟ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು…

3 hours ago

ಒಳಚರಂಡಿ ನೀರು ಕಾಲುವೆ ಸೇರಿದಂತೆ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ : ಶಾಸಕ ಜಿಟಿಡಿ ಸೂಚನೆ

ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ ಮೈಸೂರು : ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ…

3 hours ago

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…

3 hours ago