ಬೆಂಗಳೂರು: ರಾಜ್ಯದಲ್ಲಿ ಮುಂದಿನ ಚುನಾವಣೆವರೆಗೂ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಚುನಾವಣೆಯಲ್ಲಿಯೂ ನಮ್ಮದೇ ಸರ್ಕಾರ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.12) ಕಾಂಗ್ರೆಸ್ ಕಾರ್ಯಕರ್ತರಿಗೆ ವೇತನ ನೀಡುವ ಕುರಿತು ವಿಪಕ್ಷಗಳು ಚರ್ಚಿಸುವ ವೇಳೆ ಆರ್.ಅಶೋಕ್ ಅವರ ಹೇಳಿಕೆ ತಿರುಗೇಟು ನೀಡಿದ ಸಿಎಂ, 5 ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಮುಂದಿನ ಐದು ವರ್ಷಗಳು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಟಾಂಗ್ ನೀಡಿದ್ದಾರೆ.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಚಿಸಿ ಅದಕ್ಕೆ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸಿ, ಅವರಿಗೆ ಸರ್ಕಾರದಿಂದ ವೇತನ ನೀಡುತ್ತಿರುವುದಕ್ಕೆ ವಿಪಕ್ಷಗಳಿಂದ ಆಕ್ಷೇಪ, ವಿರೋಧ ವ್ಯಕ್ತವಾದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ಅವರು, ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇನ್ನೂ ಮಹಾರಾಷ್ಟ್ರದಲ್ಲಿ ಎಲ್ಲಾ ಶಾಸಕರ ಕಚೇರಿಗೂ ಆರ್ಎಸ್ಎಸ್ ಕಾರ್ಯಕರ್ತರನ್ನು ನೇಮಿಸಿಕೊಳ್ಳುತ್ತಿದೆ, ಅಂತೆಯೇ ಇಲ್ಲಿಯೂ ನೇಮಿಸಲಾಗಿದೆ. ಆದರೆ ಅವರಿಂದ ಯಾವುದೇ ತಾಲ್ಲೂಕುಗಳಲ್ಲೂ ಶಾಸಕರ ಘನತೆಗೆ ಮತ್ತು ಅಧಿಕಾರಕ್ಕೆ ಯಾವುದೇ ಚ್ಯುತಿ ಬರುವುದಿಲ್ಲ ಎಂದರು.
ಇನ್ನು ಹಣ ದುರುಪಯೋಗ ಆಗುತ್ತದೆ ಎಂಬ ಪ್ರಶ್ನೆ ಇಲ್ಲ. ನಾವು ಶಾಸಕ, ಎಂಎಲ್ಸಿಗಳ ಹಕ್ಕು ಮೊಟಕು ಮಾಡಿಲ್ಲ. ಶಾಸಕರಿಗೆ ಅಗೌರವ ಮಾಡುವ ಕೆಲಸ ಆಗಲ್ಲ. ಸ್ವತ: ನಾನೂ ಕೂಡ ಶಾಸಕ ಎಂದು ಉತ್ತರಿಸಿದ್ದಾರೆ. ಅಲ್ಲದೇ ಮಹಾರಾಷ್ಟ್ರದಲ್ಲಿ ಆರ್ಎಸ್ಎಸ್ ಕಾರ್ಯಕರ್ತರನ್ನು ಪಿಎಗಳಾಗಿ ಮಾಡಿಲ್ವಾ? ಎಂದು ತಿರುಗೇಟು ನೀಡಿದ್ದಾರೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…