ನವದೆಹಲಿ: ಸಚಿವರ ಜೊತೆ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9 ಸಾವಿರ ಕೋಟಿ ರೂಪಾಯಿ ವೆಚ್ಚದ ಡಿಪಿಆರ್ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿಯಿದ್ದು, ಆಸಕ್ತಿ ವಹಿಸಿ ಅನುಮತಿ ಕೊಡಿಸಲು ಮನವಿ ಮಾಡಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ ಬಜೆಟ್ 2023-2024ರಲ್ಲಿ ಘೋಷಿಸಿದಂತೆ 5,300 ಕೋಟಿ ರೂ ಬಿಡುಗಡೆ ಮಾಡಲು ಒತ್ತಾಯ ಮಾಡಿದ್ದು, ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರದಲ್ಲೇ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ನ್ನು ಘೋಷಿಸುವಂತೆ ಕೂಡ ಮನವಿ ಪತ್ರದಲ್ಲಿ ಕೇಳಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ ಅನುದಾನ ಕೊಡಲು ಮನವಿ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…