ಬೆಂಗಳೂರು: ವಿಧಾನ ಸೌಧ ಮುಂಭಾಗದಲ್ಲಿ ಇಂದು ( ಫೆಬ್ರವರಿ 8 ) ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಆಡಳಿತದ ಭರವಸೆಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಹಾಗೂ ಸರ್ಕಾರದ ವರ್ಚಸ್ಸನ್ನು ಹೆಚ್ಚಿಸಲು ಜನಪರ ಮತ್ತು ಸ್ಪಂದನಶೀಲ ಆಡಳಿತದ ವಿಶ್ವಾಸವನ್ನು ಸಾರ್ವಜನಿಕರಲ್ಲಿ ಮೂಡಿಸುವುದು ಇದರ ಪ್ರಮುಖ ಗುರಿಯಾಗಿದೆ. ಈ ಕಾರ್ಯಕ್ರಮವು ಮುಖ್ಯಮಂತ್ರಿಗಳು ನಡೆಸುತ್ತಿರುವ ರಾಜ್ಯಮಟ್ಟದ ಎರಡನೇ ಕಾರ್ಯಕ್ರಮವಾಗಿದ್ದು, ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಪ್ರಯತ್ನದೊಂದಿಗೆ ಜನತಾ ದರ್ಶನವನ್ನು ವಿಧಾನಸೌಧದ ಶಕ್ತಿ ಕೇಂದ್ರದ ಮುಂದೆ ನಡೆಸುತ್ತಿರುವುದು ವಿಶೇಷವಾಗಿದೆ.
ರಾಜ್ಯದ ಹಲವು ಭಾಗಗಳಿಂದ ಈ ಕಾರ್ಯಕ್ರಮಕ್ಕೆ ಬರುವ ಜನರು ಸಮಸ್ಯೆಗಳನ್ನು ಹೊತ್ತು ತರುವ ಹಿನ್ನೆಲೆಯಲ್ಲಿ ಅವುಗಳನ್ನು ನಿರ್ವಹಿಸಲಿ ವ್ಯವಸ್ಥಿತವಾಗಿ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖಾ ವತಿಯಿಂದ ತಯಾರಿ ಮಾಡಿಕೊಂಡು ವಿಧಾನಸೌಧದ ಪೂರ್ವ ಭಾಗದ ಮೆಟ್ಟಿಲುಗಳನ್ನು ಭರ್ಜರಿಯಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಮುಖ್ಯಸ್ಥರು, ಕಾರ್ಯದರ್ಶಿಗಳು ಸ್ಥಳದಲ್ಲೇ ಹಾಜರಿದ್ದು, ಸಾರ್ವಜನಿಕರ ಸಮಸ್ಯೆ, ಕುಂದು ಕೊರತೆ, ಮತ್ತು ದೂರುಗಳನ್ನು ಆಲಿಸಿ ಸ್ಥಳದಲ್ಲೇ ಬಗೆಹರಿಸಿ ಪರಿಹಾರವನ್ನು ನೀಡುವ ಉದ್ದೇಶವಾಗಿದ್ದು , ಜನಸ್ಪಂದನಕ್ಕೆ ಬರುವ ಜನರಿಗಾಗಿ ಕುಡಿಯುವ ನೀರು, ಲಘು ಉಪಹಾರ ಸೇರಿದಂತೆ ಬೇರೆ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಡಿಪಿಎಆರ್ ಅಧಿಕಾರಿಗಳು ತಿಳಿಸಿದರು.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…