ರಾಜ್ಯ

ಇಂದು ಸಿಎಂ ಸಿದ್ದರಾಮಯ್ಯ ‘ಜನ ಸ್ಪಂದನ’ ಕಾರ್ಯಕ್ರಮ

ಬೆಂಗಳೂರು: ವಿಧಾನ ಸೌಧ ಮುಂಭಾಗದಲ್ಲಿ ಇಂದು ( ಫೆಬ್ರವರಿ 8 ) ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಆಡಳಿತದ ಭರವಸೆಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಿಕೊಂಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಹಾಗೂ ಸರ್ಕಾರದ ವರ್ಚಸ್ಸನ್ನು ಹೆಚ್ಚಿಸಲು ಜನಪರ ಮತ್ತು ಸ್ಪಂದನಶೀಲ ಆಡಳಿತದ ವಿಶ್ವಾಸವನ್ನು ಸಾರ್ವಜನಿಕರಲ್ಲಿ ಮೂಡಿಸುವುದು ಇದರ ಪ್ರಮುಖ ಗುರಿಯಾಗಿದೆ. ಈ ಕಾರ್ಯಕ್ರಮವು ಮುಖ್ಯಮಂತ್ರಿಗಳು ನಡೆಸುತ್ತಿರುವ ರಾಜ್ಯಮಟ್ಟದ ಎರಡನೇ ಕಾರ್ಯಕ್ರಮವಾಗಿದ್ದು, ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಪ್ರಯತ್ನದೊಂದಿಗೆ ಜನತಾ ದರ್ಶನವನ್ನು ವಿಧಾನಸೌಧದ ಶಕ್ತಿ ಕೇಂದ್ರದ ಮುಂದೆ ನಡೆಸುತ್ತಿರುವುದು ವಿಶೇಷವಾಗಿದೆ.

ರಾಜ್ಯದ ಹಲವು ಭಾಗಗಳಿಂದ ಈ ಕಾರ್ಯಕ್ರಮಕ್ಕೆ ಬರುವ ಜನರು ಸಮಸ್ಯೆಗಳನ್ನು ಹೊತ್ತು ತರುವ ಹಿನ್ನೆಲೆಯಲ್ಲಿ ಅವುಗಳನ್ನು ನಿರ್ವಹಿಸಲಿ ವ್ಯವಸ್ಥಿತವಾಗಿ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖಾ ವತಿಯಿಂದ ತಯಾರಿ ಮಾಡಿಕೊಂಡು ವಿಧಾನಸೌಧದ ಪೂರ್ವ ಭಾಗದ ಮೆಟ್ಟಿಲುಗಳನ್ನು ಭರ್ಜರಿಯಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಮುಖ್ಯಸ್ಥರು, ಕಾರ್ಯದರ್ಶಿಗಳು ಸ್ಥಳದಲ್ಲೇ ಹಾಜರಿದ್ದು, ಸಾರ್ವಜನಿಕರ ಸಮಸ್ಯೆ, ಕುಂದು ಕೊರತೆ, ಮತ್ತು ದೂರುಗಳನ್ನು ಆಲಿಸಿ ಸ್ಥಳದಲ್ಲೇ ಬಗೆಹರಿಸಿ ಪರಿಹಾರವನ್ನು ನೀಡುವ ಉದ್ದೇಶವಾಗಿದ್ದು , ಜನಸ್ಪಂದನಕ್ಕೆ ಬರುವ ಜನರಿಗಾಗಿ ಕುಡಿಯುವ ನೀರು, ಲಘು ಉಪಹಾರ ಸೇರಿದಂತೆ ಬೇರೆ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಡಿಪಿಎಆರ್‌ ಅಧಿಕಾರಿಗಳು ತಿಳಿಸಿದರು.

andolana

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

54 mins ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

58 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

60 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

1 hour ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

1 hour ago