ರಾಜ್ಯ

ಇಂದು ಸಿಎಂ ಸಿದ್ದರಾಮಯ್ಯ ‘ಜನ ಸ್ಪಂದನ’ ಕಾರ್ಯಕ್ರಮ

ಬೆಂಗಳೂರು: ವಿಧಾನ ಸೌಧ ಮುಂಭಾಗದಲ್ಲಿ ಇಂದು ( ಫೆಬ್ರವರಿ 8 ) ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಆಡಳಿತದ ಭರವಸೆಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಿಕೊಂಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಹಾಗೂ ಸರ್ಕಾರದ ವರ್ಚಸ್ಸನ್ನು ಹೆಚ್ಚಿಸಲು ಜನಪರ ಮತ್ತು ಸ್ಪಂದನಶೀಲ ಆಡಳಿತದ ವಿಶ್ವಾಸವನ್ನು ಸಾರ್ವಜನಿಕರಲ್ಲಿ ಮೂಡಿಸುವುದು ಇದರ ಪ್ರಮುಖ ಗುರಿಯಾಗಿದೆ. ಈ ಕಾರ್ಯಕ್ರಮವು ಮುಖ್ಯಮಂತ್ರಿಗಳು ನಡೆಸುತ್ತಿರುವ ರಾಜ್ಯಮಟ್ಟದ ಎರಡನೇ ಕಾರ್ಯಕ್ರಮವಾಗಿದ್ದು, ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಪ್ರಯತ್ನದೊಂದಿಗೆ ಜನತಾ ದರ್ಶನವನ್ನು ವಿಧಾನಸೌಧದ ಶಕ್ತಿ ಕೇಂದ್ರದ ಮುಂದೆ ನಡೆಸುತ್ತಿರುವುದು ವಿಶೇಷವಾಗಿದೆ.

ರಾಜ್ಯದ ಹಲವು ಭಾಗಗಳಿಂದ ಈ ಕಾರ್ಯಕ್ರಮಕ್ಕೆ ಬರುವ ಜನರು ಸಮಸ್ಯೆಗಳನ್ನು ಹೊತ್ತು ತರುವ ಹಿನ್ನೆಲೆಯಲ್ಲಿ ಅವುಗಳನ್ನು ನಿರ್ವಹಿಸಲಿ ವ್ಯವಸ್ಥಿತವಾಗಿ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖಾ ವತಿಯಿಂದ ತಯಾರಿ ಮಾಡಿಕೊಂಡು ವಿಧಾನಸೌಧದ ಪೂರ್ವ ಭಾಗದ ಮೆಟ್ಟಿಲುಗಳನ್ನು ಭರ್ಜರಿಯಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಮುಖ್ಯಸ್ಥರು, ಕಾರ್ಯದರ್ಶಿಗಳು ಸ್ಥಳದಲ್ಲೇ ಹಾಜರಿದ್ದು, ಸಾರ್ವಜನಿಕರ ಸಮಸ್ಯೆ, ಕುಂದು ಕೊರತೆ, ಮತ್ತು ದೂರುಗಳನ್ನು ಆಲಿಸಿ ಸ್ಥಳದಲ್ಲೇ ಬಗೆಹರಿಸಿ ಪರಿಹಾರವನ್ನು ನೀಡುವ ಉದ್ದೇಶವಾಗಿದ್ದು , ಜನಸ್ಪಂದನಕ್ಕೆ ಬರುವ ಜನರಿಗಾಗಿ ಕುಡಿಯುವ ನೀರು, ಲಘು ಉಪಹಾರ ಸೇರಿದಂತೆ ಬೇರೆ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಡಿಪಿಎಆರ್‌ ಅಧಿಕಾರಿಗಳು ತಿಳಿಸಿದರು.

andolana

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

11 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago