ಹುಬ್ಬಳ್ಳಿ: ಕಾಲೇಜು ಆವರಣದಲ್ಲಿ ಫಯಾಜ್ ಎಂಬಾತನಿಂದ ಹತ್ಯೆಗೊಳಗಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಮನೆಗೆ ಇಂದು ( ಏಪ್ರಿಲ್ 25 ) ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ನೇಹಾಳ ತಂದೆ ಹಾಗೂ ತಾಯಿಗೆ ಸಾಂತ್ವನ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿನ ನೇಹಾ ಮನೆಗೆ ಭೇಟಿ ಕೊಟ್ಟ ಸಿದ್ದರಾಮಯ್ಯ ಮನೆಯಲ್ಲಿದ್ದ ನೇಹಾ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ತಂದೆ ನಿರಂಜನ ಹಿರೇಮಠ ಹಾಗೂ ತಾಯಿ ಗೀತಾಗೆ ಸಾಂತ್ವನ ಹೇಳಿದರು. ಮಗಳ ಸಾವಿನ ನೋವಿನಲ್ಲಿದ್ದ ನಿರಂಜನ ಹಿರೇಮಠ ಅವರ ಕೈಹಿಡಿದು ಸಿದ್ದರಾಮಯ್ಯ ಸಂತೈಸಿದರು.
ತಮ್ಮ ಮಗಳ ಸಾವಿಗೆ ನ್ಯಾಯ ಸಿಗಬೇಕು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ನೇಹಾ ತಂದೆ ಹಾಗೂ ತಾಯಿ ಸಿದ್ದರಾಮಯ್ಯ ಬಳಿ ಕೈಮುಗಿದು ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಪ್ರಕರಣದ ವಿಚಾರಣೆಗೆಂದು ವಿಶೇಷ ತಂಡವನ್ನು ರಚಿಸಲಾಗಿದೆ. ಖಂಡಿತವಾಗಿಯೂ ಆರೋಪಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಭರವಸೆ ನೀಡಿದರು. ಇದೊಂದು ಅಮಾನವೀಯ ಕೃತ್ಯವಾಗಿದ್ದು, ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…
ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…