ಹುಬ್ಬಳ್ಳಿ: ಕಾಲೇಜು ಆವರಣದಲ್ಲಿ ಫಯಾಜ್ ಎಂಬಾತನಿಂದ ಹತ್ಯೆಗೊಳಗಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಮನೆಗೆ ಇಂದು ( ಏಪ್ರಿಲ್ 25 ) ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ನೇಹಾಳ ತಂದೆ ಹಾಗೂ ತಾಯಿಗೆ ಸಾಂತ್ವನ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿನ ನೇಹಾ ಮನೆಗೆ ಭೇಟಿ ಕೊಟ್ಟ ಸಿದ್ದರಾಮಯ್ಯ ಮನೆಯಲ್ಲಿದ್ದ ನೇಹಾ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ತಂದೆ ನಿರಂಜನ ಹಿರೇಮಠ ಹಾಗೂ ತಾಯಿ ಗೀತಾಗೆ ಸಾಂತ್ವನ ಹೇಳಿದರು. ಮಗಳ ಸಾವಿನ ನೋವಿನಲ್ಲಿದ್ದ ನಿರಂಜನ ಹಿರೇಮಠ ಅವರ ಕೈಹಿಡಿದು ಸಿದ್ದರಾಮಯ್ಯ ಸಂತೈಸಿದರು.
ತಮ್ಮ ಮಗಳ ಸಾವಿಗೆ ನ್ಯಾಯ ಸಿಗಬೇಕು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ನೇಹಾ ತಂದೆ ಹಾಗೂ ತಾಯಿ ಸಿದ್ದರಾಮಯ್ಯ ಬಳಿ ಕೈಮುಗಿದು ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಪ್ರಕರಣದ ವಿಚಾರಣೆಗೆಂದು ವಿಶೇಷ ತಂಡವನ್ನು ರಚಿಸಲಾಗಿದೆ. ಖಂಡಿತವಾಗಿಯೂ ಆರೋಪಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಭರವಸೆ ನೀಡಿದರು. ಇದೊಂದು ಅಮಾನವೀಯ ಕೃತ್ಯವಾಗಿದ್ದು, ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…