ರಾಜ್ಯ

ಹಾದಿ ಬೀದಿಯಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವರು ಹೊಡೆದಾಡಿಕೊಳ್ಳುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಅಪಹಾಸ್ಯ

ಬೆಂಗಳೂರು: ಮುಂದೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ. ರಾಜ್ಯಾದ್ಯಂತ ಕಾಂಗ್ರೆಸ್‌ ವಿರುದ್ಧ ನಾವು ಹೋರಾಟ ಕೈಗೆತ್ತಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆಯ ಮಾತುಗಳನ್ನಾಡಿದ್ದಾರೆ.

ಲೋಕಸಭೆ ಚುನಾವಣೆಗೂ ಮುಂಚೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಎಲ್ಲಾ ಕಡೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದರು. ಆದರೆ ಇವಾಗ ನೋಡಿ, ಒಬ್ಬರಿಗೊಬ್ಬರು ರಸ್ತೆಗಳಲ್ಲಿ ನಿಂತುಕೊಂಡು ಬಡಿದಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಮುಂಬರುವ ದಿನಗಳಲ್ಲಿ ಇನ್ನೂ ಏನೇನೋ ಆಗುತ್ತೋ ಕಾದು ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಪಹಾಸ್ಯ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಿರುದ್ಧ ಕಿಡಿಕಾರಿದರು. ಜನರ ಪಾಲಿಗೆ ಸರ್ಕಾರ ಬದುಕಿದೆಯಾ ಎಂಬ ಪ್ರಶ್ನೆಯನ್ನು ಜನರೆಲ್ಲಾ ಪ್ರಶ್ನೆ ಮಾಡ್ತಿದ್ದಾರೆ. ಈ ಸರ್ಕಾರದ ವಿರುದ್ಧ ಜನರು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಹಾದಿ ಬೀದಿಯಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವರು ಹೊಡೆದಾಡಿಕೊಳ್ತಿದ್ದಾರೆ. ಹೀಗಾಗಿ ನಮ್ಮ ಮುಂದೆ ಇರೋದು ಇನ್ನು ಹೋರಾಟದ ದಿನಗಳು ಮಾತ್ರ. ಮುಂದೆ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡ್ತೀವಿ. ರಾಜ್ಯಾದ್ಯಂತ ಕಾಂಗ್ರೆಸ್‌ ವಿರುದ್ಧ ನಾವು ಹೋರಾಟ ಕೈಗೆತ್ತಿಕೊಂಡಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿಯನ್ನು ಹೊರ ರಾಜ್ಯಗಳಿಗೆ ತೆಗೆದುಕೊಂಡು ಹೋಗಿದ್ದಾರೆ. ರಾಜ್ಯ ಸರ್ಕಾರದಲ್ಲಿ ಬರೀ ಅವ್ಯವಹಾರಗಳೇ ಇವೆ. ಹೀಗಾಗಿ ನಮ್ಮ ಹೋರಾಟ ನಿರಂತರ ಎಂದು ಎಚ್ಚರಿಕೆ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

15 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

18 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

19 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

20 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

20 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

20 hours ago