ಬೆಂಗಳೂರು: ನಾನು ಸಿಎಂ ಕುರ್ಚಿ ಹಾಗೂ ಪಕ್ಷಕ್ಕೆ ಸದಾ ನಿಷ್ಠನಾಗಿರುತ್ತೇನೆ. ಮುಖ್ಯಮಂತ್ರಿಗಳು ಹೇಳಿದ ಮೇಲೆ ಅದೇ ಅಂತಿಮ. ಅದರ ಬಗ್ಗೆ ಮರುಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ನಗರದಲ್ಲಿ ಬುಧುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿಎಂ ಹುದ್ದೆ ವಿಚಾರವಾಗಿ ಯಾವುದೇ ಒಪ್ಪಂದವಾಗಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಮುಖ್ಯಮಂತ್ರಿಗಳು ಹೇಳಿದ ಮೇಲೆ ಯಾವುದೇ ತಕರಾರು ಇಲ್ಲ. ಅವರು ಹೇಳಿದ್ದೇ ಅಂತಿಮ. ಅವರ ಹೇಳಿಕೆ ನಂತರ ಈ ವಿಚಾರವಾಗಿ ಯಾವುದೇ ವಾದ, ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮುಡಾದಲ್ಲಿ ಹುರುಳಿಲ್ಲ ಎಂದು ಸಾಬೀತು
ಮೂಡಾ ಪ್ರಕರಣ ವಿಚಾರವಾಗಿ ಲೋಕಾಯುಕ್ತಕ್ಕೆ ಇಡಿ ಪತ್ರ ಬರೆದಿರುವ ಬಗ್ಗೆ ಕೇಳಿದಾಗ, ಯಾವುದೇ ತನಿಖೆ ನಡೆದರೂ ಅದು ಗೌಪ್ಯವಾಗಿರಬೇಕು. ಏನಾದರೂ ಸತ್ಯಾಂಶವಿದ್ದರೆ ಅದನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಬೇಕು. ನ್ಯಾಯಾಲಯಕ್ಕೆ ಸಲ್ಲಿಸುವ ಬದಲು ಮಾಧ್ಯಮಗಳಿಗೆ ನೀಡುತ್ತಾರೆ ಎಂದರೆ, ಅವರು ಈ ವಿಚಾರದಲ್ಲಿ ಎಷ್ಟು ಹತಾಶರಾಗಿದ್ದಾರೆ ಎಂಬುದಕ್ಕೆ ಸಾಕ್ಷಿ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಸಾಬೀತಾಗುತ್ತಿದೆ. ಆದರೂ ಚಿಂತೆ ಇಲ್ಲ. ನಮ್ಮ ಕರ್ತವ್ಯ, ನಮ್ಮ ಸರ್ಕಾರ ಹಾಗೂ ಪಕ್ಷ ಹೋರಾಟ ಮಾಡುತ್ತದೆ. ನಮಗೆ ನ್ಯಾಯಾಲಯಗಳ ಮೇಲೆ ನಂಬಿಕೆ ಇದೆ” ಎಂದು ತಿಳಿಸಿದರು.
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…