ತುಮಕೂರು : ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ಹಾಗೂ ಕಾಂಗ್ರೆಸ್ನ ಹಿರಿಯ ಶಾಸಕ ಕೆ.ಎನ್ ರಾಜಣ್ಣ ನಿವಾಸಕ್ಕೆ ಭೇಟಿ ನೀಡಿದ್ದರು
ಈ ವೇಳೆ ಅವರ ನಿವಾಸದಲ್ಲಿ ಸಿಎಂ ಅವರಿಗೆ ವಿಶೇಷವಾಗಿ ಔತಣಕೂಟದಲ್ಲಿ ಏರ್ಪಡಿಸಲಾಗಿತ್ತು.
ಊಟ ಸೇವಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಎನ್ ರಾಜಣ್ಣ ನಿವಾಸಸದಲ್ಲಿ ಸಿದ್ದಪಡಿಸಿದ್ದ ಊಟ ಚೆನ್ನಾಗಿತ್ತು ನನಗೆ ಹುಷಾರಿಲ್ಲ ಜ್ವರ ಇದ್ದುದ್ದರಿಂದ ಬಾಯಿ ಕೆಟ್ಟೋಗಿತ್ತು, ರಾಗಿ ಮುದ್ದಿ, ಕಾಲ್ ಸೂಪ್ ನಾಟಿಕೋಳಿ ಸಾರು ಸೇರಿದಂತೆ ಹಲವು ಸಾಂಪ್ರದಾಯಿಕ ಖಾದ್ಯಗಳು ಚೆನ್ನಾಗಿತ್ತು ಎಂದರು.
ಕೆಎನ್ ರಾಜಣ್ಣಗೆ ಮತ್ತ ಸಚಿವ ಸ್ಥಾನ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ರಾಜಣ್ಣಗೆ ಯಾವಗಲೂ ಸಿಹಿಸುದ್ದಿಯೇ ಇರುತ್ತೆ. ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ಮಾಡುತ್ತೇನೆ ಎಂದರು.
ಕೆ.ಎನ್.ರಾಜಣ್ಣ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಎಲ್ಲರ ಗಮನ ಸೆಳೆದಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…