ಬೆಂಗಳೂರು : ಈ ಹಿಂದೆ ಮಾಂಸದ ಊಟ ಮಾಡಿ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ವಿವಾದಕ್ಕೆ ಸಿಲುಕಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ ಅಂಥಹುದೇ ಮತ್ತೊಂದು ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಮಾಂಸಾಹಾರ ಸೇವನೆ ಮಾಡಿ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ನಡೆದ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ, ಸುತ್ತೂರು ಜಗದ್ಗುರುಗಳ ಗದ್ದುಗೆ ಭೇಟಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಈ ಆರೋಪದ ಬಗ್ಗೆ ಮಾಧ್ಯಮಗಳು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಂ, ಇಂತಹ ಸಿಲ್ಲಿ ಪ್ರಶ್ನೆಗಳನ್ನು ಕೇಳಬೇಡಿ. ಊಟ, ತಿಂಡಿ ತಿನ್ನೋದು, ಬಟ್ಟೆ ಹಾಕುವುದರ ಬಗ್ಗೆ ಮಾತಾಡಕ್ಕಾಗುತ್ತಾ? ಬಡವರ ಸಮಸ್ಯೆ ಹಾಗೂ ನಿರುದ್ಯೋಗ ಇದೆಲ್ಲ ಮಾತಾಡೋಣ. ಅದನ್ನು ಬಿಟ್ಟು ಮಾಂಸ ಸೇವಿಸಿ ಮಠಕ್ಕೆ ಭೇಟಿ ಹೀಗೆಲ್ಲಾ ಕೇಳಬೇಡಿ ಎಂದು ಗರಂ ಆದರು.
ಬಿಜೆಪಿ ಆರೋಪ ಹೀಗಿದೆ?
ಬುಧವಾರ ದೆಹಲಿಯಲ್ಲಿ ನಡೆದ ನಮ್ಮ ತೆರಿಗೆ ನಮ್ಮ ಹಕ್ಕು ಹೆಸರಿನಲ್ಲಿ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಪ್ರತಿಭಟನೆ ನಂತರ ಸಿಎಂ ಸಿದ್ದರಾಮಯ್ಯ ಜಂತರ್ ಮಂತರ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಭೋಜನಕೂಟದಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದರು.
ಮಧ್ಯಾಹ್ನ ಮಾಂಸದ ಊಟ ಮಾಡಿ ಬಳಿಕ ನೇರವಾಗಿ ದೆಹಲಿಯಿಂದ ಮೈಸೂರಿಗೆ ಬಂದಿದ್ದಾರೆ. ಬಳಿಕ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಾತ್ರೆಯಲ್ಲಿ ಭಾಗವಹಿಸಿ ಗದ್ದುಗೆ ಭೇಟಿ ಮಾಡಿದ್ದು ಎಷ್ಟು ಸರಿ ಎಂದು ಬಿಜೆಪಿ ಆರೋಪ ಮಾಡಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…