ಬೆಂಗಳೂರು : ಈ ಹಿಂದೆ ಮಾಂಸದ ಊಟ ಮಾಡಿ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ವಿವಾದಕ್ಕೆ ಸಿಲುಕಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ ಅಂಥಹುದೇ ಮತ್ತೊಂದು ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಮಾಂಸಾಹಾರ ಸೇವನೆ ಮಾಡಿ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ನಡೆದ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ, ಸುತ್ತೂರು ಜಗದ್ಗುರುಗಳ ಗದ್ದುಗೆ ಭೇಟಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಈ ಆರೋಪದ ಬಗ್ಗೆ ಮಾಧ್ಯಮಗಳು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಂ, ಇಂತಹ ಸಿಲ್ಲಿ ಪ್ರಶ್ನೆಗಳನ್ನು ಕೇಳಬೇಡಿ. ಊಟ, ತಿಂಡಿ ತಿನ್ನೋದು, ಬಟ್ಟೆ ಹಾಕುವುದರ ಬಗ್ಗೆ ಮಾತಾಡಕ್ಕಾಗುತ್ತಾ? ಬಡವರ ಸಮಸ್ಯೆ ಹಾಗೂ ನಿರುದ್ಯೋಗ ಇದೆಲ್ಲ ಮಾತಾಡೋಣ. ಅದನ್ನು ಬಿಟ್ಟು ಮಾಂಸ ಸೇವಿಸಿ ಮಠಕ್ಕೆ ಭೇಟಿ ಹೀಗೆಲ್ಲಾ ಕೇಳಬೇಡಿ ಎಂದು ಗರಂ ಆದರು.
ಬಿಜೆಪಿ ಆರೋಪ ಹೀಗಿದೆ?
ಬುಧವಾರ ದೆಹಲಿಯಲ್ಲಿ ನಡೆದ ನಮ್ಮ ತೆರಿಗೆ ನಮ್ಮ ಹಕ್ಕು ಹೆಸರಿನಲ್ಲಿ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಪ್ರತಿಭಟನೆ ನಂತರ ಸಿಎಂ ಸಿದ್ದರಾಮಯ್ಯ ಜಂತರ್ ಮಂತರ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಭೋಜನಕೂಟದಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದರು.
ಮಧ್ಯಾಹ್ನ ಮಾಂಸದ ಊಟ ಮಾಡಿ ಬಳಿಕ ನೇರವಾಗಿ ದೆಹಲಿಯಿಂದ ಮೈಸೂರಿಗೆ ಬಂದಿದ್ದಾರೆ. ಬಳಿಕ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಾತ್ರೆಯಲ್ಲಿ ಭಾಗವಹಿಸಿ ಗದ್ದುಗೆ ಭೇಟಿ ಮಾಡಿದ್ದು ಎಷ್ಟು ಸರಿ ಎಂದು ಬಿಜೆಪಿ ಆರೋಪ ಮಾಡಿದೆ.
ಬೆಂಗಳೂರು: ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ…
ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…
ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಈ…
ನವದೆಹಲಿ: ಕಾಂಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್.6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…
ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…