CM will resolve the MLAs' dissatisfaction: Minister G. Parameshwara
ಬೆಂಗಳೂರು: ಶಾಸಕರ ಅಸಮಾಧಾನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಗೆಹರಿಸುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಚಿವರ ವಿರುದ್ಧ ಶಾಸಕರ ಅಸಮಾಧಾನ ಎಲ್ಲಾ ಸರ್ಕಾರಗಳಲ್ಲೂ ಸಾಮಾನ್ಯ. ಶಾಸಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದು ಕಷ್ಟ ಸಾಧ್ಯ. ಹಾಗಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ಮುಖ್ಯಮಂತ್ರಿಯವರು ಶಾಸಕರ ಜೊತೆ ಚರ್ಚೆ ಮಾಡಿ ಬಗೆಹರಿಸುತ್ತಾರೆ ಎಂದರು.
ಈ ಮೊದಲು ಶಾಸಕಾಂಗ ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹೇಳಿಕೊಳ್ಳಲು ಶಾಸಕರಿಗೆ ಅವಕಾಶ ನೀಡಲಾಗಿತ್ತು. ಸಾಕಷ್ಟು ಚರ್ಚೆಗಳೂ ಆಗಿವೆ. ಇದೆಲ್ಲಾ ಸಣ್ಣಪುಟ್ಟ ಸಮಸ್ಯೆ, ಬಗೆಹರಿಯುತ್ತದೆ. ಹೈಕಮಾಂಡ್ ಮುಖ್ಯಮಂತ್ರಿಯವರಿಗೆ ಯಾವ ರೀತಿಯ ಸೂಚನೆ ನೀಡಿದೆಯೋ ಗೊತ್ತಿಲ್ಲ. ಒಂದು ವೇಳೆ ಸೂಚನೆ ನೀಡಿದ್ದರೆ ಅದರಂತೆ ನಡೆದುಕೊಳ್ಳುತ್ತಾರೆ ಎಂದರು.
ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಅದು ರಾಜ್ಯದ ಸಮಸ್ಯೆ ಅಲ್ಲ. ಕ್ಷೇತ್ರದ ಅಭಿವೃದ್ಧಿಗೆ ಪ್ರತಿಯೊಂದಕ್ಕೂ ತಲಾ 50 ಕೋಟಿ ರೂ.ಗಳ ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗುತ್ತವೆ ಎಂದು ತಿಳಿಸಿದರು.
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…
ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…
ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ,…
ಬೇಸಿಗೆ ಬಿಸಿಲಿನ ಝಳಕ್ಕೆ ಬೆಂದು ಬಸವಳಿಯುತ್ತಿದ್ದ ಕರ್ನಾಟಕಕ್ಕೆ ಸುರಿದ ಅಕಾಲಿಕ ಮಳೆ ತಂಪೆರೆಯಿತು ಎನ್ನುವಷ್ಟರಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ…