CM will resolve the MLAs' dissatisfaction: Minister G. Parameshwara
ಬೆಂಗಳೂರು: ಶಾಸಕರ ಅಸಮಾಧಾನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಗೆಹರಿಸುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಚಿವರ ವಿರುದ್ಧ ಶಾಸಕರ ಅಸಮಾಧಾನ ಎಲ್ಲಾ ಸರ್ಕಾರಗಳಲ್ಲೂ ಸಾಮಾನ್ಯ. ಶಾಸಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದು ಕಷ್ಟ ಸಾಧ್ಯ. ಹಾಗಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ಮುಖ್ಯಮಂತ್ರಿಯವರು ಶಾಸಕರ ಜೊತೆ ಚರ್ಚೆ ಮಾಡಿ ಬಗೆಹರಿಸುತ್ತಾರೆ ಎಂದರು.
ಈ ಮೊದಲು ಶಾಸಕಾಂಗ ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹೇಳಿಕೊಳ್ಳಲು ಶಾಸಕರಿಗೆ ಅವಕಾಶ ನೀಡಲಾಗಿತ್ತು. ಸಾಕಷ್ಟು ಚರ್ಚೆಗಳೂ ಆಗಿವೆ. ಇದೆಲ್ಲಾ ಸಣ್ಣಪುಟ್ಟ ಸಮಸ್ಯೆ, ಬಗೆಹರಿಯುತ್ತದೆ. ಹೈಕಮಾಂಡ್ ಮುಖ್ಯಮಂತ್ರಿಯವರಿಗೆ ಯಾವ ರೀತಿಯ ಸೂಚನೆ ನೀಡಿದೆಯೋ ಗೊತ್ತಿಲ್ಲ. ಒಂದು ವೇಳೆ ಸೂಚನೆ ನೀಡಿದ್ದರೆ ಅದರಂತೆ ನಡೆದುಕೊಳ್ಳುತ್ತಾರೆ ಎಂದರು.
ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಅದು ರಾಜ್ಯದ ಸಮಸ್ಯೆ ಅಲ್ಲ. ಕ್ಷೇತ್ರದ ಅಭಿವೃದ್ಧಿಗೆ ಪ್ರತಿಯೊಂದಕ್ಕೂ ತಲಾ 50 ಕೋಟಿ ರೂ.ಗಳ ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗುತ್ತವೆ ಎಂದು ತಿಳಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…