ರಾಜ್ಯ

ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ: ಕಾರಣ ಇಷ್ಟೇ

ಬೆಂಗಳೂರು: ಕೆಂಪು ಮೆಣಸಿನಕಾಯಿ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿ) ದರ ನಿಗದಿಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ.

ಈ ಸಂಬಂಧ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಅವರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಲಕ್ಷಾಂತರ ಕೆಂಪು ಮೆಣಸಿನಕಾಯಿ ಬೆಳೆಗಾರರಿದ್ದಾರೆ. ಮಾರುಕಟ್ಟೆಯಲ್ಲಿ ಕೆಂಪು ಮೆಣಸಿನಾಕಯಿ ಬೆಲೆ ಕುಸಿತು ಕಂಡಿದ್ದು, ಇದರಿಂದ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಕೂಡಲೇ ಕೆಂಪು ಮೆಣಸಿನಕಾಯಿಗೆ ಪಿಡಿಪಿ ದರ ನಿಗದಿ ಮಾಡಿ ಎಂದು ಕೋರಿದ್ದಾರೆ.

ಆಂಧ್ರಪ್ರದೇಶದಲ್ಲಿ ಕೆಂಪು ಮೆಣಸಿನಕಾಯಿಗಳಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಅಡಿಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆಯನು ಭಾರತ ಸರ್ಕಾರ ನಿಗದಿಪಡಿಸಿದೆ. ಉತ್ಪಾದನೆಯ ಶೇ 25 ರಷ್ಟರ ವ್ಯಾಪ್ತಿಯೊಂದಿಗೆ ಕ್ವಿಂಟಲ್‌ಗೆ 11,781 ಕನಿಷ್ಠ ಮಧ್ಯಸ್ಥಿಕೆ ಬೆಲೆ (ಎಂಐಪಿ) ನಿಗದಿಪಡಿಸಿದೆ. ಇದು ಸ್ವಾಗಾತಾರ್ಹವಾದರೂ, ರೈತರು ಎದುರಿಸುತ್ತಿರುವ ಸಂಕಷ್ಟ ಇನ್ನೂ ಪರಿಹಾರವಾಗಿಲ್ಲ ಎಂದು ಸಿಎಂ ಕಳವಳ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಒಣಮೆಣಸಿನಕಾಯಿ ಉತ್ಪಾದನೆ ಕ್ವಿಂಟಾಲ್‌ಗೆ 12,675ರೂ. ಇರುವುದಾಗಿ ಕರ್ನಾಟಕ ಕೃಷಿ ಬೆಲೆ ಆಯೋಗ ನಿಗದಿಪಡಿಸಿದೆ. ಆದರೆ, ರೈತರು ಪ್ರತಿ ಕ್ವಿಂಟಾಲ್‌ಗೆ 8,300 ರೂ.ಗೆ ಮಾರಾಟ ಮಾಡುತ್ತಿದ್ದಾರೆ. ಇದು ರೈತರಿಗೆ ದೊಡ್ಡ ಒಡೆತ ನೀಡಿದೆ. ಹೀಗಾಗಿ ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯ ಪ್ರವೇಶಿಸಿ ಪಿಡಿಪಿ ದರ ಯೋಜನೆ ಜಾರಿಗೊಳಿಸುವುದು ಅನಿವಾರ್ಯ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

15 mins ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

2 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

2 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

3 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

3 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

4 hours ago