ರಾಜ್ಯ

ಸಿಎಂ ಪುತ್ರನದ್ದು ʻಚೈಲ್ಡಿಶ್ʼ ಹೇಳಿಕೆ : ಕಾಂಗ್ರೆಸ್‌ ಶಾಸಕ

ಬೆಂಗಳೂರು : ವಿಧಾನ ಪರಿಷತ್ ಸದಸ್ಯರೂ ಆಗಿರುವ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯನವರದ್ದು ಚೈಲ್ಡಿಶ್ ಹೇಳಿಕೆ ಎಂದು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಚನ್ನಗಿರಿಯ ಶಾಸಕರಾಗಿರುವ ಬಸವರಾಜು ವಿ.ಶಿವಗಂಗಾ, ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ಹಲವು ಬಾರಿ, ನಾಯಕತ್ವ ಬದಲಾವಣೆ ಮತ್ತು ಡಿಕೆಶಿ ಮುಂದಿನ ಸಿಎಂ ಎನ್ನುವ ಹೇಳಿಕೆಯನ್ನು ನೀಡಿದ್ದವರು. ಇದಕ್ಕಾಗಿ, ಅವರಿಗೆ ಕೆಪಿಸಿಸಿಯ ಶಿಸ್ತು ಸಮಿತಿ ನೋಟಿಸ್ ಕೂಡಾ ಜಾರಿ ಮಾಡಿತ್ತು. ಈಗ, ಮತ್ತೊಮ್ಮೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಆ ಮೂಲಕ ಕಾಂಗ್ರೆಸ್‌ನಲ್ಲಿ ಅಪಸ್ವರ ಇರುವುದನ್ನು ಒಪ್ಪಿಕೊಂಡಿದ್ದಾರೆ.

ಇದನ್ನು ಓದಿ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಸಿಎಂ ತವರಿನಲ್ಲೇ ಶುರುವಾಯ್ತು ವಿರೋಧ

ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಯತೀಂದ್ರ, ನಮ್ಮ ಅಪ್ಪಾಜಿಯವರು ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಇಂತಹ ಸಮಯದಲ್ಲಿ, ವೈಚಾರಿಕವಾಗಿ ಮತ್ತು ಜನಪರ ಸಿದ್ದಾಂತವನ್ನು ಇಟ್ಟುಕೊಂಡವರು ಬೇಕು. ಅದರ ಮುಂದಾಳತ್ವವನ್ನು ವಹಿಸಿಕೊಳ್ಳುವವರು ಅಂದರೆ ಸತೀಶ್ ಜಾರಕಿಹೊಳಿ. ಅವರ ಮಾರ್ಗದರ್ಶನ ಎಲ್ಲರಿಗೂ ಇರಬೇಕು ಎಂದು ಡಾ.ಯತೀಂದ್ರ ಹೇಳಿದ್ದರು. ಆ ಮೂಲಕ, ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಎನ್ನುವ ರೀತಿಯಲ್ಲಿ ಬಿಂಬಿಸಿದ್ದರು.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಬಸವರಾಜು ಶಿವಗಂಗಾ, ಇದೊಂದು ತೀರಾ ಬಾಲಿಶತನದ ಹೇಳಿಕೆ, ಯತೀಂದ್ರ ಅವರು ಹಾಲೀ ವಿಧಾನ ಪರಿಷತ್ ಸದಸ್ಯರು. ಹಿಂದೆ, ಶಾಸಕರೂ ಆಗಿದ್ದವರು. ಹಿರಿಯರಾದವರು ಹೇಳಿಕೆ ನೀಡುವಾಗ, ತೂಕಬದ್ದವಾಗಿ ಮಾತನಾಡಬೇಕು, ಇಲ್ಲದಿದ್ದರೆ ಅದು ಬೇರೆ ಅರ್ಥವನ್ನು ಕೊಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ರಾಜಮನೆತನದಲ್ಲಾದರೆ ಉತ್ತರಾಧಿಕಾರಿ ಯಾರು ಎನ್ನುವುದು ಮುಂಚೆಯೇ ನಿರ್ಧಾರವಾಗಿರುತ್ತದೆ. ನಮ್ಮದು ಹೈಕಮಾಂಡ್ ಸಂಸ್ಕೃತಿಯ ಪಕ್ಷ. ನಮ್ಮ ವರಿಷ್ಠರು ಇಂತಹ ಹೇಳಿಕೆಯನ್ನು ಗಮನಿಸುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ.

ನಾನು ಈ ಹಿಂದೆ ಮಾತನಾಡಿದ್ದಕ್ಕೆ ನನಗೆ ನೋಟಿಸ್ ಜಾರಿ ಮಾಡಲಾಗಿತ್ತು ಎಂದು ಬಸವರಾಜು ಹೇಳಿದ್ದಾರೆ. ಯಾವುದೇ ಒಂದು ಕುಟುಂಬದವರು ಯಾರು ಮುಂದಿನ ಮುಖ್ಯಮಂತ್ರಿ ಎಂದು ನಿರ್ಧರಿಸುವುದಲ್ಲ. ಯತೀಂದ್ರ ಅವರು ಇಂತಹ ಹೇಳಿಕೆಯನ್ನು ಕೊಡುವುದನ್ನು ನಿಲ್ಲಿಸಬೇಕು. ನಾವೇ, ವಿರೋಧ ಪಕ್ಷಗಳಿಗೆ ಆಹಾರ ನೀಡಿದಂತಾಗುವುದಿಲ್ಲವೇ ಎಂದು ಬಸವರಾಜು ಶಿವಗಂಗಾ ಪ್ರಶ್ನಿಸಿದ್ದಾರೆ. ಹೈಕಮಾಂಡ್ ಈ ಸಂಬಂಧ ಸೂಕ್ತ ಕ್ರಮವನ್ನು ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದ್ದಾರೆ. ಯತೀಂದ್ರ ಅವರ ಹೇಳಿಕೆಯನ್ನು ನಾವು ಒಪ್ಪುವುದಿಲ್ಲ. ಹೈಕಮಾಂಡ್ ಎಚ್ಚರಿಕೆಯ ನಂತರವೂ, ಅವರಿಂದ ಇಂತಹ ಹೇಳಿಕೆ ಬರುತ್ತಿದೆ. ಹಿಂದೆ ಕೂಡಾ, ಹಲವು ಬಾರಿ ಪೂರ್ಣಾವಧಿಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಹೇಳಿದ್ದರು. ಆದರೆ, ಇದುವರೆಗೆ ಒಮ್ಮೆಯೂ ಹೈಕಮಾಂಡ್ ನೋಟಿಸ್ ನೀಡಿಲ್ಲ ಎಂದು ಬಸವರಾಜು ಶಿವಗಂಗಾ ಕಿಡಿಕಾರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

2 mins ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

8 mins ago

ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…

20 mins ago

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…

36 mins ago

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

1 hour ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

2 hours ago