ರಾಜ್ಯ

ಸೆಪ್ಟಂಬರ್ 2ರಂದು ತವರು ಜಿಲ್ಲೆಗೆ ಸಿಎಂ ಪ್ರವಾಸ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 2 ಹಾಗೂ 3 ರಂದು ಮೈಸೂರು ಪ್ರವಾಸದಲ್ಲಿರಲಿದ್ದಾರೆ. ಸಿಎಂ ಅವರಿಗೆ ನಾಳೆ (ಸೆಪ್ಟಂಬರ್ 2) ಮುಡಾ ವಿಚಾರಣೆ ಇರುವುದರಿಂದ ತಮ್ಮ ಎಲ್ಲಾ ಕೆಲಸಗಳನ್ನು ಮುಂದಕ್ಕೆ ಹಾಕಲಾಗಿದ್ದು, ನಾಳೆ ವಿಚಾರಣೆ ಮುಗಿದ ಬಳಿಕ ಸೆಪ್ಟೆಂಬರ್‌ 2ರಂದು ರಾತ್ರಿ 7,25 ಕ್ಕೆ ಮೈಸೂರು ನಗರಕ್ಕಾಗಮಿಸುವ ಅವರು ಮೈಸೂರಿನಲ್ಲಿ ವಾಸ್ತವ್ಯ ಇರಲಿದ್ದಾರೆ.

ಸೆಪ್ಟೆಂಬರ್ 3 ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.

ನಂತರ ಬೆಳಿಗ್ಗೆ 10,30ಕ್ಕೆ ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ನಡೆಯಲಿರುವ ಚಾಮುಂಡಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಿ, ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್‌ ಟ್ರೋಫಿಗೆ ಚಾಲನೆ

ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…

1 hour ago

ಹಲವು ಹೊಸ ದಾಖಲೆಗಳಿಗೆ ಷರಾ ಬರೆದ 2025

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…

1 hour ago

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

1 hour ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

9 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

14 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

14 hours ago