ಮಂಗಳೂರು : ಕಳೆದ ನಾಲ್ಕು ವರ್ಷಗಳ ಹಿಂದೆ ಅಂತಾರಾಷ್ಟ್ರೀಯವಾಗಿ ಪ್ರಸಿದ್ಧಿ ಪಡೆದ ಉದ್ಯಮಗಳಲ್ಲಿ ಒಂದಾಗಿದ್ದ ಕಾಫಿಡೇ ಮಾಲೀಕ ಸಿದ್ದಾರ್ಥ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸ್ಥಳದಲ್ಲಿಯೇ ಇಂದು ಮತ್ತೊಬ್ಬ ಉದ್ಯಮಿ ತನ್ನ ಕಾರನ್ನು ನಿಲ್ಲಿಸಿ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾನೆ.
ಕಾಫಿ ಡೇ ಮಾಲೀಕ ಸಿದ್ದಾರ್ಥ ಅವರ ಆತ್ಮಹತ್ಯೆ ಬೆನ್ನಲ್ಲಿಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗುವ ಪ್ರಕರಣಗಳು ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯ ಪಕ್ಕದಲ್ಲಿರುವ ಸೇತುವೆಯ ಆಚೆ-ಈಚೆ ಬೇಲಿಯನ್ನು ನಿರ್ಮಾಣ ಮಾಡಲಾಗಿತ್ತು. ತಂತಿ ಬೇಲಿ ಹಾಗೂ ತಡೆಗೋಡೆ ನಿರ್ಮಾಣ ಮಾಡಿದರೂ ಅದನ್ನು ಮುರಿದು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ.
ಸೋಮವಾರ ಬೆಳಗ್ಗೆ ಉದ್ಯಮಿಯೊಬ್ಬ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗ ತಂತಿ ಬೇಲಿ ನಿರ್ಮಾಣ ಮಾಡಿದ ನಂತರ ಮೂರು ವರ್ಷಗಳ ಬಳಿಕ ಮತ್ತೆ ನೇತ್ರಾವತಿ ಸೇತುವೆ ಆತ್ಮಹತ್ಯೆ ಘಟನೆ ನಡೆದಿದೆ.
ಚಿಕ್ಕಮಗಳೂರಿನ ಗೋಕುಲ್ ಫಾರ್ಮ್ ನಿವಾಸಿ ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 3 ವರ್ಷಗಳಿಂದ ಆತ್ಮಹತ್ಯೆಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಮೂರು ವರ್ಷಗಳ ಬಳಿಕ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ.
2019ರಲ್ಲಿ ಕಾಫಿ ಡೇ ಮಾಲೀಕ ಸಿದ್ದಾರ್ಥ ಆತ್ಮಹತ್ಯೆ ನಂತರ ಈ ಸೇತುವೆಯಲ್ಲಿ ಸರಣಿ ಆತ್ಮಹತ್ಯೆಗಳಾಗಿತ್ತು. ಹೀಗಾಗಿ 2020 ರಲ್ಲಿ ಆತ್ಮಹತ್ಯೆ ತಡೆಗಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ತಡೆಬೇಲಿಯನ್ನು ಅಳವಡಿಸಿತ್ತು. 2020ರ ನಂತರ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗಳು ನಿಂತಿದ್ದವು. ಆದರೆ, ಇದೀಗ ಮೂರು ವರ್ಷಗಳ ಬಳಿಕ ಮತ್ತೆ ಆತ್ಮಹತ್ಯೆ ಮೂಲಕ ನೇತ್ರಾವತಿ ಸೇತುವೆ ಸುದ್ದಿಯಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…