ಬೆಂಗಳೂರು : ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವೆಂದು ಶಂಕಿಸಲಾಗಿರುವ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನು ಕರ್ನಾಟಕ ರಾಜ್ಯದಲ್ಲೂ ನಿಷೇಧ ಮಾಡಲಾಗಿದೆ.
ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ (ಕೆಎಫ್ಆರ್ಡಿಎ) ಎಲ್ಲ ಸಗಟು ಮಾರಾಟಗಾರರ, ಔಷಧ ವ್ಯಾಪಾರಿಗಳು ಮತ್ತು ವಿತರಕರುಗಳಿಗೆ ಪತ್ರ ಬರೆದಿದ್ದು, ಕೋಲ್ಡ್ರಿಫ್ ಕಾಫ್ ಸಿರಪ್ ಮಾರಾಟ ಮಾಡದಂತೆ ಸೂಚನೆ ನೀಡಿದೆ. ಜೊತೆಗೆ ಡೈಎಥಿಲೀನ್ ಗ್ಲೈಕಾಲ್ ಕಂಟೇಟ್ ಕಾಫ್ ಸಿರಪ್ ತಡೆಗೂ ಸೂಚಿಸಲಾಗಿದೆ.
ಇದನ್ನೂ ಓದಿ:-ರಾಜ್ಯದಲ್ಲೂ ಕೋಲ್ಡ್ರಿಫ್ ಸಿರಪ್ ನಿಷೇಧ!
ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನು ಕರ್ನಾಟಕದಲ್ಲಿ ಮಾತ್ರವಲ್ಲ ತಮಿಳನಾಡಿನಲ್ಲೂ ನಿಷೇಧ ಮಾಡಲಾಗಿದೆ. ಎಲ್ಲಾ ಸ್ಟಾಕ್ಗಳನ್ನೂ ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಮುಂದಿನ ಸರ್ಕಾರದ ಆದೇಶದವರೆಗೆ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕಾಫ್ ಸಿರಫ್ ಮಾರಾಟ ಮಾಡದಂತೆ ತಿಳಿಸಲಾಗಿದ್ದು, ಕರ್ನಾಟಕದಲ್ಲಿ ಈಗಾಗಲೇ ಮಾರಾಟಗೊಂಡಿರುವ ಕೋಲ್ಡ್ರಿಫ್ ಸಿರಪ್ನ ಪ್ರಸ್ತುತ ಸ್ಟಾಕ್ ವಿವರಗಳನ್ನು ಡ್ರಗ್ಸ್ ಕಂಟ್ರೋಲ್ ಇಲಾಖೆಗೆ ಕಳುಹಿಸುವಂತೆ ಸೂಚನೆ ನೀಡಲಾಗಿದೆ.
ಮಕ್ಕಳ ಸಾವುಗಳ ಬೆನ್ನಲ್ಲೇ ಕಾಫ್ ಸಿರಪ್ ಬಳಕೆ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು, ಎರಡು ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡದಂತೆ ವೈದ್ಯರಿಗೆ ಸೂಚನೆ ನೀಡಿದೆ.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…