ರಾಜ್ಯ

ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಶೀತಲ ಸಮರ ಉತ್ತುಂಗಕ್ಕೇರಲಿದೆ: ವಿಜಯೇಂದ್ರ

ಶಿವಮೊಗ್ಗ : ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರ ಮುಂದಿನ ದಿನಗಳಲ್ಲಿ ಉತ್ತುಂಗಕ್ಕೇರಲಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು ಭವಿಷ್ಯ ನುಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪಾಂಡವರು–ಕೌರವರ ನಡುವೆ ಗದಾಯುದ್ಧ ನಡೆದಿದ್ದರ ಬಗ್ಗೆ ಈ ಹಿಂದೆ ಕೇಳಿದ್ದೆವು. ಈಗ ಕಾಂಗ್ರೆಸ್ ಪಕ್ಷದ ಒಳಗಡೆಯೇ ಮಹಾಯುದ್ಧವಾಗಲಿದೆ. ರಾಜ್ಯದ ಜನರು ಶೀಘ್ರ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ‘ ಎಂದು ಹೇಳಿದರು.

ಕಾಂಗ್ರೆಸ್ ನಾಯಕರ ನಡುವಿನ ಈ ಆಂತರಿಕ ಕಿತ್ತಾಟ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ. ಮೋದಿ ಮತ್ತೊಮ್ಮೆ ಪ್ರಧಾನಿ ಹುದ್ದೆಗೆ ಏರಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಆದರೆ ಬಿಜೆಪಿ ಮತ್ತೆ ಗೆದ್ದು ಬರಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬರಗಾಲ ಇದ್ದರೂ ಪರಿಹಾರ ಕಾರ್ಯಗಳತ್ತ ಗಮನ ನೀಡದೇ ಆಂತರಿಕ ಕಿತ್ತಾಟದಲ್ಲಿ ತೊಡಗಿರುವ ಕಾಂಗ್ರೆಸ್‌ನವರಿಗೆ ಜನ ಶಾಪ ಹಾಕುತ್ತಿದ್ದಾರೆ. ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಾ ಬೈಯುತ್ತಿದ್ದರೆ ಕೇಂದ್ರದಿಂದ ಅನುದಾನ ಸಿಗುತ್ತಾ ಎಂದು ಯಡಿಯೂರಪ್ಪ ಅವರು ಹೇಳಿರುವುದು ಸರಿಯಾಗಿದೆ. ಪ್ರಧಾನಿ ಟೀಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗೊಲ್ಲ. ಬದಲಿಗೆ ರೈತಾಪಿ ವರ್ಗಕ್ಕೆ, ಜನಸಾಮಾನ್ಯರಿಗೆ ಅನಾನುಕೂಲವಾಗಲಿದೆ ಎಂದರು.

ಈ ಹಿಂದೆ ಬಿಜೆಪಿ ಸರ್ಕಾರ ರಚನೆ ಸಮಯದಲ್ಲಿ ಕಾಂಗ್ರೆಸ್‌ನಿಂದ ಹೋಗಿದ್ದ ಶಾಸಕರಿಗೆ ತಲಾ ರೂ.50 ಕೋಟಿ ಕೊಡಲಾಗಿತ್ತು ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರ ಹೇಳಿಕೆಯೇ ಹಾಸ್ಯಾಸ್ಪದ ಎಂದು ಪ್ರಶ್ನೆಯೊಂದಕ್ಕೆ ಇದೇ ವೇಳೆ ಪ್ರತಿಕ್ರಿಯಿಸಿದರು.

andolanait

Recent Posts

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

29 seconds ago

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

37 mins ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

6 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

7 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

7 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

8 hours ago