ರಾಜ್ಯ

ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಶೀತಲ ಸಮರ ಉತ್ತುಂಗಕ್ಕೇರಲಿದೆ: ವಿಜಯೇಂದ್ರ

ಶಿವಮೊಗ್ಗ : ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರ ಮುಂದಿನ ದಿನಗಳಲ್ಲಿ ಉತ್ತುಂಗಕ್ಕೇರಲಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು ಭವಿಷ್ಯ ನುಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪಾಂಡವರು–ಕೌರವರ ನಡುವೆ ಗದಾಯುದ್ಧ ನಡೆದಿದ್ದರ ಬಗ್ಗೆ ಈ ಹಿಂದೆ ಕೇಳಿದ್ದೆವು. ಈಗ ಕಾಂಗ್ರೆಸ್ ಪಕ್ಷದ ಒಳಗಡೆಯೇ ಮಹಾಯುದ್ಧವಾಗಲಿದೆ. ರಾಜ್ಯದ ಜನರು ಶೀಘ್ರ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ‘ ಎಂದು ಹೇಳಿದರು.

ಕಾಂಗ್ರೆಸ್ ನಾಯಕರ ನಡುವಿನ ಈ ಆಂತರಿಕ ಕಿತ್ತಾಟ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ. ಮೋದಿ ಮತ್ತೊಮ್ಮೆ ಪ್ರಧಾನಿ ಹುದ್ದೆಗೆ ಏರಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಆದರೆ ಬಿಜೆಪಿ ಮತ್ತೆ ಗೆದ್ದು ಬರಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬರಗಾಲ ಇದ್ದರೂ ಪರಿಹಾರ ಕಾರ್ಯಗಳತ್ತ ಗಮನ ನೀಡದೇ ಆಂತರಿಕ ಕಿತ್ತಾಟದಲ್ಲಿ ತೊಡಗಿರುವ ಕಾಂಗ್ರೆಸ್‌ನವರಿಗೆ ಜನ ಶಾಪ ಹಾಕುತ್ತಿದ್ದಾರೆ. ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಾ ಬೈಯುತ್ತಿದ್ದರೆ ಕೇಂದ್ರದಿಂದ ಅನುದಾನ ಸಿಗುತ್ತಾ ಎಂದು ಯಡಿಯೂರಪ್ಪ ಅವರು ಹೇಳಿರುವುದು ಸರಿಯಾಗಿದೆ. ಪ್ರಧಾನಿ ಟೀಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗೊಲ್ಲ. ಬದಲಿಗೆ ರೈತಾಪಿ ವರ್ಗಕ್ಕೆ, ಜನಸಾಮಾನ್ಯರಿಗೆ ಅನಾನುಕೂಲವಾಗಲಿದೆ ಎಂದರು.

ಈ ಹಿಂದೆ ಬಿಜೆಪಿ ಸರ್ಕಾರ ರಚನೆ ಸಮಯದಲ್ಲಿ ಕಾಂಗ್ರೆಸ್‌ನಿಂದ ಹೋಗಿದ್ದ ಶಾಸಕರಿಗೆ ತಲಾ ರೂ.50 ಕೋಟಿ ಕೊಡಲಾಗಿತ್ತು ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರ ಹೇಳಿಕೆಯೇ ಹಾಸ್ಯಾಸ್ಪದ ಎಂದು ಪ್ರಶ್ನೆಯೊಂದಕ್ಕೆ ಇದೇ ವೇಳೆ ಪ್ರತಿಕ್ರಿಯಿಸಿದರು.

andolanait

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

45 mins ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

1 hour ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

2 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

2 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

7 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

8 hours ago