ರಾಜ್ಯ

ಶೀತದಲೆ ಹಿನ್ನೆಲೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ ಮಾಡಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಗಾಳಿಯ ಅಬ್ಬರ ಜೋರಾಗಿದ್ದು, ಮೈಕೊರೆವ ಚಳಿ ಪ್ರಮಾಣವು ಹೆಚ್ಚಾಗಿದೆ. ಶೀತದಲೆಯ ಹಿನ್ನೆಲೆಯಲ್ಲಿ ಕಲಬುರ್ಗಿ, ಬೀದರ್‌ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನ, ಉಡುಪಿ ಜಿಲ್ಲೆಗಳಲ್ಲಿಯೂ ಒಣಹವೆ ಚಳಿ ಮುಂದುವರಿಯಲಿದೆ. ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಒಣಹವೆ ಇದ್ದು ಇಂದೂ ಕೂಡ ಒಣಹವೆ ಮುಂದುವರಿಯಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 7 ಭಾನುವಾರ

2 hours ago

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ: ಸರ್ಕಾರಕ್ಕೆ ಎದುರಾಗಿದ್ದ ಕಂಟಕ ತಾತ್ಕಾಲಿಕ ನಿವಾರಣೆ

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…

15 hours ago

ಛತ್ತೀಸ್‌ಗಢದಲ್ಲಿ ಎಬೋಲಾ ಭೀತಿ: ಮೂವರು ಆಫ್ರಿಕಾ ಪ್ರಜೆಗಳಿಗೆ 21 ದಿನ ಕ್ವಾರಂಟೈನ್‌

ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್‌ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…

16 hours ago

ಬೊಮ್ಮನದೊಡ್ಡಿ ಬಳಿ ಚಿರತೆ ಸಂಚಾರ: ಗ್ರಾಮಸ್ಥರಲ್ಲಿ ಆತಂಕ

ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್‌ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…

16 hours ago

ಕೇರಳದಲ್ಲಿ ಭಾರೀ ಮಳೆ: ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್‌, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…

17 hours ago

ಅಣ್ಣಾಮಲೈ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನಗೊಂಡಿದೆ. ರಾಜ್ಯ…

17 hours ago