ರಾಜ್ಯ

ತುಲಾಭಾರದ ವೇಳೆ ಕುಸಿದು ಬಿದ್ದ ತಕ್ಕಡಿ: ಪೇಜಾವರ ಶ್ರೀಗಳಿಗೆ ಗಾಯ!

ನವದೆಹಲಿ : ತುಲಾಭಾರ ನಡೆಯುವ ವೇಳೆ ತಕ್ಕಡಿ ಕುಸಿದು ಬಿದ್ದು ಪೇಜಾವರ ಶ್ರೀಗಳು ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ಭಕ್ತರು ತುಲಾಭಾರ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ಈ ವೇಳೆ ಈ ಅವಘಡ ಸಂಭವಿಸಿದ್ದು ಪೇಜಾವರ ಸ್ವಾಮೀಜಿ ಸುರಕ್ಷಿತವಾಗಿದ್ದಾರೆ.

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರಿಗೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನವ ದೆಹಲಿಯಲ್ಲಿ ಅದ್ದೂರಿ ಕಾರ್ಯಕ್ರಮಗಳು ಏರ್ಪಾಟಾಗಿವೆ. ಒಟ್ಟು ಐದು ದಿನಗಳ ಕಾರ್ಯಕ್ರಮದಲ್ಲಿ ನಾನಾ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬುಧವಾರ, ಶಿಷ್ಯರೆಲ್ಲಾ ಸೇರಿ ಪೇಜಾವರ ಶ್ರೀಗಳಿಗೆ ತುಲಾಭಾರ ಏರ್ಪಡಿಸಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ತಕ್ಕಡಿ ಕುಸಿದು, ತಕ್ಕಡಿಯ ಮೇಲ್ಭಾಗ ಶ್ರೀಗಳ ತಲೆಯ ಮೇಲೆ ಉರುಳಿದೆ. ಆತಂಕಗೊಂಡ ಭಕ್ತರು ಸುತ್ತುವರಿಯುತ್ತಿದ್ದಂತೆ, ಕೈ ಸನ್ನೆಯ ಮೂಲಕ ಸ್ವಾಮೀಜಿ ತಾನು ಸುರಕ್ಷಿತವಾಗಿದ್ದೇನೆ ಎಂದು ತಿಳಿಸಿದ್ದಾರೆ.

ಸದ್ಯ ತಕ್ಕಡಿ ಕುಸಿದು ಬಿದ್ದ ವಿಡಿಯೋ ಎಲ್ಲಾ ಕಡೆ ವೈರಲ್ ಆಗುತ್ತದೆ. ನಯೋಲಿನ್ ಹಗ್ಗದ ಮೂಲಕ ತಕ್ಕಡಿಯನ್ನು ಕಟ್ಟಿರುವುದರಿಂದ ಶಿಥಿಲಗೊಂಡ ಹಗ್ಗ ತುಂಡಾಗಿ ಬಿದ್ದಿರುವ ಸಾಧ್ಯತೆ ಇದೆ. ಭೂಮಟ್ಟದಿಂದ ಸ್ವಲ್ಪವೇ ಎತ್ತರದಲ್ಲಿ ತಕ್ಕಡಿ ಇದ್ದ ಕಾರಣ ಪೇಜಾವರ ಶ್ರೀಗಳಿಗೆ ಕುಸಿದು ಬಿದ್ದು ಯಾವುದೇ ಅಡ್ಡಿಯಾಗಿಲ್ಲ‌‌. ಆದರೆ ತಲೆಯ ಭಾಗಕ್ಕೆ ಗಾಯವಾಗಿದೆ.

ತುಲಾಭಾರ ಮುಗಿಯುತ್ತಿದ್ದಂತೆ ಸುಧಾರಿಸಿಕೊಂಡ ಶ್ರೀಗಳು, ನಂತರ ಎರಡು ದಿನಗಳ ಕಾಲ ನಿರಂತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ನಾನು ಸುರಕ್ಷಿತವಾಗಿದ್ದೇನೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಯೋಗಪಟು ಪೇಜಾವರ ಶ್ರೀ

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥರು ಅಪ್ರತಿಮ ಯೋಗಪಟುವಾಗಿದ್ದಾರೆ. ಶ್ರೀಗಳಿಗೆ 60 ವರ್ಷ ವಯಸ್ಸು ತುಂಬಿದೆ ಎಂದರೆ ನಂಬಲು ಸಾಧ್ಯವಿಲ್ಲ. ಈಗಲೂ ಪ್ರತಿದಿನ ಕಠಿಣ ಹಠ ಯೋಗಗಳನ್ನು ಮಾಡುತ್ತಾರೆ. ಹಾಗಾಗಿ ತಕ್ಕಡಿ ಕುಸಿದು ಬಿದ್ದರೂ ಯಾವುದೇ ಗಂಭೀರ ಗಾಯಗಳಿಲ್ಲದೆ ಆರೋಗ್ಯವಾಗಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

12 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago