ರಾಜ್ಯ

ತುಲಾಭಾರದ ವೇಳೆ ಕುಸಿದು ಬಿದ್ದ ತಕ್ಕಡಿ: ಪೇಜಾವರ ಶ್ರೀಗಳಿಗೆ ಗಾಯ!

ನವದೆಹಲಿ : ತುಲಾಭಾರ ನಡೆಯುವ ವೇಳೆ ತಕ್ಕಡಿ ಕುಸಿದು ಬಿದ್ದು ಪೇಜಾವರ ಶ್ರೀಗಳು ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ಭಕ್ತರು ತುಲಾಭಾರ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ಈ ವೇಳೆ ಈ ಅವಘಡ ಸಂಭವಿಸಿದ್ದು ಪೇಜಾವರ ಸ್ವಾಮೀಜಿ ಸುರಕ್ಷಿತವಾಗಿದ್ದಾರೆ.

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರಿಗೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನವ ದೆಹಲಿಯಲ್ಲಿ ಅದ್ದೂರಿ ಕಾರ್ಯಕ್ರಮಗಳು ಏರ್ಪಾಟಾಗಿವೆ. ಒಟ್ಟು ಐದು ದಿನಗಳ ಕಾರ್ಯಕ್ರಮದಲ್ಲಿ ನಾನಾ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬುಧವಾರ, ಶಿಷ್ಯರೆಲ್ಲಾ ಸೇರಿ ಪೇಜಾವರ ಶ್ರೀಗಳಿಗೆ ತುಲಾಭಾರ ಏರ್ಪಡಿಸಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ತಕ್ಕಡಿ ಕುಸಿದು, ತಕ್ಕಡಿಯ ಮೇಲ್ಭಾಗ ಶ್ರೀಗಳ ತಲೆಯ ಮೇಲೆ ಉರುಳಿದೆ. ಆತಂಕಗೊಂಡ ಭಕ್ತರು ಸುತ್ತುವರಿಯುತ್ತಿದ್ದಂತೆ, ಕೈ ಸನ್ನೆಯ ಮೂಲಕ ಸ್ವಾಮೀಜಿ ತಾನು ಸುರಕ್ಷಿತವಾಗಿದ್ದೇನೆ ಎಂದು ತಿಳಿಸಿದ್ದಾರೆ.

ಸದ್ಯ ತಕ್ಕಡಿ ಕುಸಿದು ಬಿದ್ದ ವಿಡಿಯೋ ಎಲ್ಲಾ ಕಡೆ ವೈರಲ್ ಆಗುತ್ತದೆ. ನಯೋಲಿನ್ ಹಗ್ಗದ ಮೂಲಕ ತಕ್ಕಡಿಯನ್ನು ಕಟ್ಟಿರುವುದರಿಂದ ಶಿಥಿಲಗೊಂಡ ಹಗ್ಗ ತುಂಡಾಗಿ ಬಿದ್ದಿರುವ ಸಾಧ್ಯತೆ ಇದೆ. ಭೂಮಟ್ಟದಿಂದ ಸ್ವಲ್ಪವೇ ಎತ್ತರದಲ್ಲಿ ತಕ್ಕಡಿ ಇದ್ದ ಕಾರಣ ಪೇಜಾವರ ಶ್ರೀಗಳಿಗೆ ಕುಸಿದು ಬಿದ್ದು ಯಾವುದೇ ಅಡ್ಡಿಯಾಗಿಲ್ಲ‌‌. ಆದರೆ ತಲೆಯ ಭಾಗಕ್ಕೆ ಗಾಯವಾಗಿದೆ.

ತುಲಾಭಾರ ಮುಗಿಯುತ್ತಿದ್ದಂತೆ ಸುಧಾರಿಸಿಕೊಂಡ ಶ್ರೀಗಳು, ನಂತರ ಎರಡು ದಿನಗಳ ಕಾಲ ನಿರಂತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ನಾನು ಸುರಕ್ಷಿತವಾಗಿದ್ದೇನೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಯೋಗಪಟು ಪೇಜಾವರ ಶ್ರೀ

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥರು ಅಪ್ರತಿಮ ಯೋಗಪಟುವಾಗಿದ್ದಾರೆ. ಶ್ರೀಗಳಿಗೆ 60 ವರ್ಷ ವಯಸ್ಸು ತುಂಬಿದೆ ಎಂದರೆ ನಂಬಲು ಸಾಧ್ಯವಿಲ್ಲ. ಈಗಲೂ ಪ್ರತಿದಿನ ಕಠಿಣ ಹಠ ಯೋಗಗಳನ್ನು ಮಾಡುತ್ತಾರೆ. ಹಾಗಾಗಿ ತಕ್ಕಡಿ ಕುಸಿದು ಬಿದ್ದರೂ ಯಾವುದೇ ಗಂಭೀರ ಗಾಯಗಳಿಲ್ಲದೆ ಆರೋಗ್ಯವಾಗಿದ್ದಾರೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

8 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

21 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

22 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

22 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

22 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

22 hours ago