ಬೆಂಗಳೂರು : ಬಿಬಿಎಂಪಿಯ ಮುಖ್ಯ ಇಂಜಿನಿಯರಿಂಗ್ ಛಿಫ್ ಸರ್ಕಾರದ ಹೆಸರು ಹೇಳಿಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಖಾಸಗಿಯಾಗಿ ಭೇಟಿಯಾಗಲು ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ,ಇಂಜಿನಿಯರಿಂಗ್ ಛಿಫ್ ಪ್ರಹ್ಲಾದ್ ಇರುವವರೆಗೂ ಬಿಬಿಎಂಪಿ ಉದ್ಧಾರ ಆಗಲ್ಲ ಎಂದಿದ್ದಾರೆ.
ಆತ ಬಂದ ಮೇಲೆ ಒಂದು ದೊಡ್ಡ ಕೆಲವನ್ನು ಮಾಡಿಲ್ಲ. ಅವನು ಇರುವವರೆಗೂ ಈ ಸಂಸ್ಥೆ ಉದ್ಧಾರ ಆಗಲ್ಲ. ಆತ ಬರೀ ವಾಂಕ್ ರಾಜ, ಇವರ ಹೆಸರು ಹೇಳಿಕೊಂಡು ದುಡ್ಡು ವಸೂಲಿ ಮಾಡುತ್ತಿದ್ದಾರೆ. ಆತನನ್ನು ಉಳಿಸಿಕೊಳ್ಳುವುದು ಬಿಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಅದನ್ನು ನಿರ್ಧರಿಸಲು ನಾನು ಸೂಕ್ತ ವ್ಯಕ್ತಿಯಲ್ಲ. ಬಿಬಿಎಂಪಿಯನ್ನು ಹಾಳು ಮಾಡುತ್ತಿರುವುದೇ ಆತ ಎಂದು ಕಿಡಿಕಾರಿದರು.
ಊರಿನವರೊಂದಿಗೆ ಡಿ.ಕೆ.ಶಿವಕುಮಾರ್ ಅವರನ್ನು ಖಾಸಗಿಯಾಗಿ ಭೇಟಿ ಮಾಡಲು ಬಂದಿದ್ದೇನೆ. ಸರ್ಕಾರ ಗುತ್ತಿಗೆದಾರರ ಬಾಕಿಯಲ್ಲಿ ಸ್ವಲ್ಪ ಬಿಡುಗಡೆ ಮಾಡಿದೆ, ಅದರ ಬಗ್ಗೆ ನಮಗೆ ಪೂರ್ತಿ ಸಮಾಧಾನ ಇಲ್ಲ. ಸದ್ಯಕ್ಕೆ ಸ್ವಲ್ಪ ಉತ್ತಮ ಎನ್ನಬಹುದಷ್ಟೆ. ಪೂರ್ತಿ ಬಿಡುಗಡೆ ಮಾಡಿ ಎಂದು ನಾವು ತುರ್ತು ಒತ್ತಡ ಹೇರುತ್ತಿದ್ದೇವೆ. ಡಿಸೆಂಬರ್ ವೇಳೆಗೆ ಬಿಡುಗಡೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದರು.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…