ರಾಜ್ಯ

ವಾಣಿಜ್ಯ ತೆರಿಗೆ ಸಂಗ್ರಹ| ನಿಗದಿತ ಗುರಿ ಸಾಧಿಸದ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು: ಸಿ.ಎಂ

ಯಾವುದೇ ಕಾರಣಕ್ಕೂ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಗುರಿಗಿಂತ ಕಡಿಮೆಯಾಗಲೇ ಬಾರದು: ಸಿ.ಎಂ ಸ್ಪಷ್ಟ ಸೂಚನೆ

ಬೆಂಗಳೂರು: ಇನ್ಮೇಲೆ ಪ್ರತಿ ತಿಂಗಳ ಕೊನೆಗೆ ನಾನೇ  ನೇರವಾಗಿ ಪ್ರಗತಿ ಪರಿಶೀಲನೆ ನಡೆಸ್ತೇನೆ. ಪ್ರಗತಿ ಕಾಣಿಸದಿದ್ದರೆ ಮುಲಾಜಿಲ್ಲದೆ ನಿಮ್ಮನ್ನು ಬದಲಾಯಿಸ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂಟಿ ಆಯುಕ್ತರುಗಳಿಗೆ  ಸ್ಪಷ್ಟ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ ವೇಳೆ ಈ ಸೂಚನೆ ನೀಡಿದರು.‌

2024-25 ನೇ ಸಾಲಿನಲ್ಲಿ ಒಟ್ಟು ಗುರಿ ರೂ. 1,10,000 ಕೋಟಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ. ಅಕ್ಟೋಬರ್‌ ಅಂತ್ಯದವರೆಗೆ ಒಟ್ಟು ರೂ. 58,773 ಕೋಟಿ ಸಂಗ್ರಹಿಸಲಾಗಿದ್ದು, ಇದರಲ್ಲಿ ಜಿಎಸ್‌ಟಿ ರೂ. 44,783 ಕೋಟಿ, ಕೆಎಸ್‌ಟಿ ರೂ. 13,193 ಕೋಟಿ, ವೃತ್ತಿ ತೆರಿಗೆ ರೂ. 797 ಕೋಟಿ ಸೇರಿದೆ ಎಂದರು.

ಅಕ್ಟೋಬರ್‌ ಕೊನೆಯವರೆಗೆ ಶೇ.53.5 ಗುರಿ ಸಾಧನೆಯಾಗಿದೆ. 2023-24ನೇ ಸಾಲಿಗೆ ಹೋಲಿಸಿದರೆ ರೂ.5,957 ಕೋಟಿ ಹೆಚ್ಚುವರಿ ಸಂಗ್ರಹವಾಗಿರುತ್ತದೆ. ಮುಂದಿನ ಐದು ತಿಂಗಳ ಅವಧಿಯಲ್ಲಿ ಪ್ರತಿ ತಿಂಗಳು ರೂ.10200ಕೋಟಿ ತೆರಿಗೆ ಸಂಗ್ರಹ ಗುರಿಯನ್ನು ಇರಿಸಿ ಮಾರ್ಚ್‌ ಒಳಗಾಗಿ ಗುರಿಯನ್ನು ಸಾಧಿಸಬೇಕು. ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮಾತ್ರ ಗುರಿ ಸಾಧನೆ ಸಾಧ್ಯ. ರಾಜ್ಯದ ಅಭಿವೃದ್ಧಿಗೆ ತೆರಿಗೆ ಸಂಗ್ರಹದಲ್ಲಿ ಗುರಿಯನ್ನು ಸಾಧಿಸಬೇಕಿದೆ ಎಂದರು.

ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ನಡೆಸಲಿದ್ದೇನೆ. ನಿಗದಿತ ಗುರಿಯನ್ನು ಸಾಧಿಸದ ಅಧಿಕಾರಿಗಳನ್ನು ಹೊಣೆಗಾರ ಮಾಡಲಾಗುವುದು. ಯಾವುದೇ ಕಾರಣಕ್ಕೂ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಗುರಿಗಿಂತ ಕಡಿಮೆಯಾಗಲೇ ಬಾರದು. ಕರ ಸಮಾಧಾನ ಯೋಜನೆ ಅಡಿ ರೂ. 2ಸಾವಿರ ಕೋಟಿ ಹೆಚ್ಚುವರಿ ಸಂಗ್ರಹಣೆಯ ನಿರೀಕ್ಷೆಯಿದೆ ಎಂದರು.

ಅಬಕಾರಿ ಇಲಾಖೆ ತೆರಿಗೆ ಸಂಗ್ರಹ ಪರಿಶೀಲನೆ

• 2024-25 ನೇ ಸಾಲಿನಲ್ಲಿ ಒಟ್ಟು ಗುರಿ ರೂ. 38525 ಕೋಟಿ ಅಬಕಾರಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ. ಅಕ್ಟೋಬರ್‌ 28ರವರೆಗೆ ರೂ. 20237 ಕೋಟಿ ಸಂಗ್ರಹವಾಗಿದೆ.

• ಇದುವರೆಗೆ ಶೇ.52.53 ಗುರಿ ಸಾಧನೆ ಮಾಡಲಾಗಿದ್ದು, ಮಾರ್ಚ್‌ ಒಳಗಾಗಿ ನಿಗದಿತ ಗುರಿಯನ್ನು ಸಾಧಿಸಲು ಕ್ರಮ ಕೈಗೊಳ್ಳಬೇಕು.

• ಕಳೆದ ವರ್ಷಕ್ಕಿಂತ ಈ ಅವಧಿಯಲ್ಲಿ 1301.15ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹಿಸಲಾಗಿದೆ.

• ಗೋವಾದಿಂದ ಅಕ್ರಮ ಮದ್ಯ ಸಾಗಾಟವನ್ನು ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು.

• ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ದೂರುಗಳು ಬಂದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಎ.ಶಿಖಾ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago