ರಾಜ್ಯ

ಸಂಸತ್‌ನಲ್ಲಿ ಕಲರ್ ಸ್ಮೋಕ್‌ ಬಾಂಬ್‌ ಪ್ರಕರಣ: ಮನೋರಂಜನ್‌ ಕುಟುಂಬಕ್ಕೆ ಸಂಕಷ್ಟ

ಮೈಸೂರು : ಬುಧವಾರ ಸಂಸತ್ತಿನ ಲೋಕಸಭಾ ಕಲಾಪಕ್ಕೆ ನುಗ್ಗಿ ಕಲರ್‌ ಸ್ಮೋಕ್‌ ಸಿಡಿಸಿದ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ. ಇದರಲ್ಲಿ ಮೈಸೂರಿನ ಮನೋರಂಜನ್‌ ಎಂಬ ಯುವಕ ಕೂಡಾ ಸೇರಿದ್ದಾನೆ.

ಈ ಯುವಕ ಮಾಡಿದ ತಪ್ಪಿನ ಕಾರಣದಿಂದ ಅವರ ಕುಟುಂಬದವರಿಗೂ ಸಂಕಷ್ಟ ಎದುರಾಗಿದೆ.

ಶುಕ್ರವಾರ ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್‌ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹೋಗಿದ್ದರು.

ಇದೀಗ ಮನೋರಂಜನ್‌ ಪೋಷಕರಿಗೆ ಸೂಚನೆ ನೀಡಲಾಗಿದೆ. ಮನೋರಂಜನ್‌ ಕುಟುಂಬಸ್ಥರು ಮೈಸೂರು ಬಿಟ್ಟು ಎಲ್ಲೂ ತೆರಳದಂತೆ ಸೂಚನೆ ಕೊಡಲಾಗಿದೆ.

ನಮ್ಮ ಸೂಚನೆ ಸಿಗುವವರೆಗೂ ನೀವು ಮೈಸೂರಿನಲ್ಲಿರೇ ಇರಬೇಕು. ಮೈಸೂರು ಬಿಟ್ಟು ಎಲ್ಲೂ ಹೋಗಬಾರದು. ಒಂದು ವೇಳೆ ತೀರಾ ತುರ್ತು ಪರಿಸ್ಥಿತಿ ಇದ್ದರೆ ನಮ್ಮ ಗಮನಕ್ಕೆ ತಂದು, ನಮ್ಮ ಅನುಮತಿ ಪಡೆದೇ ಮೈಸೂರಿನಿಂದ ಹೊರಹೋಗಬೇಕು ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ.

ಇನ್ನು ನಿಮಗೆ ಯಾವುದೇ ಕರೆ ಬಂದರೂ ಅವುಗಳನ್ನು ಸ್ವೀಕಾರ ಮಾಡಿ. ಹಾಗೆಯೇ ಎಲಿಂದ ಕರೆ ಬಂತು ಎಂಬ ಮಾಹಿತಿಯನ್ನು ಕಡ್ಡಾಯವಾಗಿ ನಮಗೆ ತಿಳಿಸಿ ಎಂದು ಮನೋರಂಜನ್‌ ಪೋಷಕರಿಗೆ ಗುಪ್ತಚರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago