ಮೈಸೂರು : ಬುಧವಾರ ಸಂಸತ್ತಿನ ಲೋಕಸಭಾ ಕಲಾಪಕ್ಕೆ ನುಗ್ಗಿ ಕಲರ್ ಸ್ಮೋಕ್ ಸಿಡಿಸಿದ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ. ಇದರಲ್ಲಿ ಮೈಸೂರಿನ ಮನೋರಂಜನ್ ಎಂಬ ಯುವಕ ಕೂಡಾ ಸೇರಿದ್ದಾನೆ.
ಈ ಯುವಕ ಮಾಡಿದ ತಪ್ಪಿನ ಕಾರಣದಿಂದ ಅವರ ಕುಟುಂಬದವರಿಗೂ ಸಂಕಷ್ಟ ಎದುರಾಗಿದೆ.
ಶುಕ್ರವಾರ ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹೋಗಿದ್ದರು.
ಇದೀಗ ಮನೋರಂಜನ್ ಪೋಷಕರಿಗೆ ಸೂಚನೆ ನೀಡಲಾಗಿದೆ. ಮನೋರಂಜನ್ ಕುಟುಂಬಸ್ಥರು ಮೈಸೂರು ಬಿಟ್ಟು ಎಲ್ಲೂ ತೆರಳದಂತೆ ಸೂಚನೆ ಕೊಡಲಾಗಿದೆ.
ನಮ್ಮ ಸೂಚನೆ ಸಿಗುವವರೆಗೂ ನೀವು ಮೈಸೂರಿನಲ್ಲಿರೇ ಇರಬೇಕು. ಮೈಸೂರು ಬಿಟ್ಟು ಎಲ್ಲೂ ಹೋಗಬಾರದು. ಒಂದು ವೇಳೆ ತೀರಾ ತುರ್ತು ಪರಿಸ್ಥಿತಿ ಇದ್ದರೆ ನಮ್ಮ ಗಮನಕ್ಕೆ ತಂದು, ನಮ್ಮ ಅನುಮತಿ ಪಡೆದೇ ಮೈಸೂರಿನಿಂದ ಹೊರಹೋಗಬೇಕು ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ.
ಇನ್ನು ನಿಮಗೆ ಯಾವುದೇ ಕರೆ ಬಂದರೂ ಅವುಗಳನ್ನು ಸ್ವೀಕಾರ ಮಾಡಿ. ಹಾಗೆಯೇ ಎಲಿಂದ ಕರೆ ಬಂತು ಎಂಬ ಮಾಹಿತಿಯನ್ನು ಕಡ್ಡಾಯವಾಗಿ ನಮಗೆ ತಿಳಿಸಿ ಎಂದು ಮನೋರಂಜನ್ ಪೋಷಕರಿಗೆ ಗುಪ್ತಚರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…