ರಾಜ್ಯ

ಸಂಸತ್‌ನಲ್ಲಿ ಕಲರ್ ಸ್ಮೋಕ್‌ ಬಾಂಬ್‌ ಪ್ರಕರಣ: ಮನೋರಂಜನ್‌ ಕುಟುಂಬಕ್ಕೆ ಸಂಕಷ್ಟ

ಮೈಸೂರು : ಬುಧವಾರ ಸಂಸತ್ತಿನ ಲೋಕಸಭಾ ಕಲಾಪಕ್ಕೆ ನುಗ್ಗಿ ಕಲರ್‌ ಸ್ಮೋಕ್‌ ಸಿಡಿಸಿದ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ. ಇದರಲ್ಲಿ ಮೈಸೂರಿನ ಮನೋರಂಜನ್‌ ಎಂಬ ಯುವಕ ಕೂಡಾ ಸೇರಿದ್ದಾನೆ.

ಈ ಯುವಕ ಮಾಡಿದ ತಪ್ಪಿನ ಕಾರಣದಿಂದ ಅವರ ಕುಟುಂಬದವರಿಗೂ ಸಂಕಷ್ಟ ಎದುರಾಗಿದೆ.

ಶುಕ್ರವಾರ ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್‌ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹೋಗಿದ್ದರು.

ಇದೀಗ ಮನೋರಂಜನ್‌ ಪೋಷಕರಿಗೆ ಸೂಚನೆ ನೀಡಲಾಗಿದೆ. ಮನೋರಂಜನ್‌ ಕುಟುಂಬಸ್ಥರು ಮೈಸೂರು ಬಿಟ್ಟು ಎಲ್ಲೂ ತೆರಳದಂತೆ ಸೂಚನೆ ಕೊಡಲಾಗಿದೆ.

ನಮ್ಮ ಸೂಚನೆ ಸಿಗುವವರೆಗೂ ನೀವು ಮೈಸೂರಿನಲ್ಲಿರೇ ಇರಬೇಕು. ಮೈಸೂರು ಬಿಟ್ಟು ಎಲ್ಲೂ ಹೋಗಬಾರದು. ಒಂದು ವೇಳೆ ತೀರಾ ತುರ್ತು ಪರಿಸ್ಥಿತಿ ಇದ್ದರೆ ನಮ್ಮ ಗಮನಕ್ಕೆ ತಂದು, ನಮ್ಮ ಅನುಮತಿ ಪಡೆದೇ ಮೈಸೂರಿನಿಂದ ಹೊರಹೋಗಬೇಕು ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ.

ಇನ್ನು ನಿಮಗೆ ಯಾವುದೇ ಕರೆ ಬಂದರೂ ಅವುಗಳನ್ನು ಸ್ವೀಕಾರ ಮಾಡಿ. ಹಾಗೆಯೇ ಎಲಿಂದ ಕರೆ ಬಂತು ಎಂಬ ಮಾಹಿತಿಯನ್ನು ಕಡ್ಡಾಯವಾಗಿ ನಮಗೆ ತಿಳಿಸಿ ಎಂದು ಮನೋರಂಜನ್‌ ಪೋಷಕರಿಗೆ ಗುಪ್ತಚರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago