ಬೆಂಗಳೂರು: ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಕ್ಕೆ ಅನುಮತಿ ನೀಡುವ ನಿಯಮಗಳನ್ನು ಸಡಿಲಗೊಳಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಪ್ರಸ್ತಾಪಿಸಿದರು.
ಗಮನ ಸೆಳೆಯುವ ಸೂಚನೆ ವೇಳೆ ಶಾಸಕ ಸುನೀಲ್ ಕುಮಾರ್ ಮಾತನಾಡಿ, ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಪ್ರದರ್ಶನ ನಿಲ್ಲಿಸುವಂತೆ ಅಡೆತಡೆಗಳು ಇವೆ. ಅದನ್ನು ಸಡಿಲಗೊಳಿಸಿ ಎಂದು ಮನವಿ ಮಾಡಿದರು.
ಈ ವೇಳೆ ಸ್ಪೀಕರ್ ಮಾತನಾಡಿ, ಮೊದಲು ಆ ರೀತಿ ಇರಲಿಲ್ಲ. 10 ಗಂಟೆಯ ನಂತರ ಧ್ವನಿವರ್ಧಕ ಬಳಸಬಾರದು ಎಂದು ನಿಯಮ ತಂದರು. ಈಗ ಎಲ್ಲಾ ಕಡೆ ಅಧಿಕಾರಿಗಳು ಈ ರೀತಿಯ ನಿಯಮ ಮಾಡುತ್ತಿದ್ದಾರೆ. ಸರ್ಕಾರ ಸರಿಪಡಿಸಿ ಎಂದು ಸೂಚಿಸಿದರು.
ಗೃಹ ಸಚಿವರ ಪರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ನಮ್ಮ ಸಂಸ್ಕೃತಿಗೆ ತೊಂದರೆ ಆಗಬಾರದು. ದೇಶಿಯ ಆಟಗಳಿಗೆ ಯಾವುದೇ ತೊಂದರೆ ಆಗದ ರೀತಿ ಗೃಹ ಸಚಿವರ ಜೊತೆ ಚರ್ಚಿಸಿ ನಿಯಮಗಳನ್ನು ಸರಳೀಕರಣ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಈ ವೇಳೆ ಶಾಸಕ ನೇಮಿರಾಜ್ ನಾಯ್ಕ್ ಮಾತನಾಡಿ, ಕೋಳಿಅಂಕಕ್ಕೆ ತೊಂದರೆ ಆಗುತ್ತಿರುವುದರ ಬಗ್ಗೆ ಪ್ರಸ್ತಾಪಿಸಿದರು.
ಆಗ ಮಧ್ಯ ಪ್ರವೇಶಿಸ ಮಾಡಿದ ಸುನೀಲ್ ಕುಮಾರ್, ಕೋಳಿ ಅಂಕ ಮೊದಲಿನಿಂದಲೂ ಇದೆ. ಕೋಳಿ ಅಂಕದ ಕೋಳಿ ರುಚಿ ಬಹಳ ಚೆನ್ನಾಗಿದೆ. ನೀವು ಬಂದರೆ ಆ ರುಚಿ ತೋರಿಸುತ್ತೇವೆ ಎಂದು ಡಿಕೆಶಿಗೆ ಸುನೀಲ್ ಹೇಳಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…