ರಾಜ್ಯ

ಕೋಳಿ ಅಂಕದ ಕೋಳಿ ರುಚಿ ತೋರಿಸ್ತೀವಿ ಬನ್ನಿ: ಡಿಕೆಶಿಗೆ ಸುನೀಲ್‌ ಕುಮಾರ್‌ ಆಹ್ವಾನ

ಬೆಂಗಳೂರು: ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಕ್ಕೆ ಅನುಮತಿ ನೀಡುವ ನಿಯಮಗಳನ್ನು ಸಡಿಲಗೊಳಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ ಪ್ರಸ್ತಾಪಿಸಿದರು.

ಗಮನ ಸೆಳೆಯುವ ಸೂಚನೆ ವೇಳೆ ಶಾಸಕ ಸುನೀಲ್‌ ಕುಮಾರ್‌ ಮಾತನಾಡಿ, ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಪ್ರದರ್ಶನ ನಿಲ್ಲಿಸುವಂತೆ ಅಡೆತಡೆಗಳು ಇವೆ. ಅದನ್ನು ಸಡಿಲಗೊಳಿಸಿ ಎಂದು ಮನವಿ ಮಾಡಿದರು.

ಈ ವೇಳೆ ಸ್ಪೀಕರ್‌ ಮಾತನಾಡಿ, ಮೊದಲು ಆ ರೀತಿ ಇರಲಿಲ್ಲ. 10 ಗಂಟೆಯ ನಂತರ ಧ್ವನಿವರ್ಧಕ ಬಳಸಬಾರದು ಎಂದು ನಿಯಮ ತಂದರು. ಈಗ ಎಲ್ಲಾ ಕಡೆ ಅಧಿಕಾರಿಗಳು ಈ ರೀತಿಯ ನಿಯಮ ಮಾಡುತ್ತಿದ್ದಾರೆ. ಸರ್ಕಾರ ಸರಿಪಡಿಸಿ ಎಂದು ಸೂಚಿಸಿದರು.

ಗೃಹ ಸಚಿವರ ಪರವಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿ, ನಮ್ಮ ಸಂಸ್ಕೃತಿಗೆ ತೊಂದರೆ ಆಗಬಾರದು. ದೇಶಿಯ ಆಟಗಳಿಗೆ ಯಾವುದೇ ತೊಂದರೆ ಆಗದ ರೀತಿ ಗೃಹ ಸಚಿವರ ಜೊತೆ ಚರ್ಚಿಸಿ ನಿಯಮಗಳನ್ನು ಸರಳೀಕರಣ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಈ ವೇಳೆ ಶಾಸಕ ನೇಮಿರಾಜ್‌ ನಾಯ್ಕ್‌ ಮಾತನಾಡಿ, ಕೋಳಿಅಂಕಕ್ಕೆ ತೊಂದರೆ ಆಗುತ್ತಿರುವುದರ ಬಗ್ಗೆ ಪ್ರಸ್ತಾಪಿಸಿದರು.

ಆಗ ಮಧ್ಯ ಪ್ರವೇಶಿಸ ಮಾಡಿದ ಸುನೀಲ್‌ ಕುಮಾರ್‌, ಕೋಳಿ ಅಂಕ ಮೊದಲಿನಿಂದಲೂ ಇದೆ. ಕೋಳಿ ಅಂಕದ ಕೋಳಿ ರುಚಿ ಬಹಳ ಚೆನ್ನಾಗಿದೆ. ನೀವು ಬಂದರೆ ಆ ರುಚಿ ತೋರಿಸುತ್ತೇವೆ ಎಂದು ಡಿಕೆಶಿಗೆ ಸುನೀಲ್‌ ಹೇಳಿದರು.

 

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

22 mins ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

26 mins ago

ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ: ಕಬಿನಿ ಜಲಾಶಯದ ಒಳಹರಿವು ಹೆಚ್ಚಳ

ಎಚ್‌.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ…

2 hours ago

ಇಂದಿನಿಂದ 6 ದಿನ ಪ್ರಧಾನಿ ಮೋದಿ ವಿದೇಶ ಪ್ರವಾಸ

ನವದೆಹಲಿ: ಇಂದಿನಿಂದ ಆರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ. ಈ…

2 hours ago

ಅಷ್ಟಾಂಗ ಯೋಗದ ರಾಜಧಾನಿ ಮೈಸೂರು

ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…

4 hours ago

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

5 hours ago