ಬೆಂಗಳೂರು: ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಕ್ಕೆ ಅನುಮತಿ ನೀಡುವ ನಿಯಮಗಳನ್ನು ಸಡಿಲಗೊಳಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಪ್ರಸ್ತಾಪಿಸಿದರು.
ಗಮನ ಸೆಳೆಯುವ ಸೂಚನೆ ವೇಳೆ ಶಾಸಕ ಸುನೀಲ್ ಕುಮಾರ್ ಮಾತನಾಡಿ, ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಪ್ರದರ್ಶನ ನಿಲ್ಲಿಸುವಂತೆ ಅಡೆತಡೆಗಳು ಇವೆ. ಅದನ್ನು ಸಡಿಲಗೊಳಿಸಿ ಎಂದು ಮನವಿ ಮಾಡಿದರು.
ಈ ವೇಳೆ ಸ್ಪೀಕರ್ ಮಾತನಾಡಿ, ಮೊದಲು ಆ ರೀತಿ ಇರಲಿಲ್ಲ. 10 ಗಂಟೆಯ ನಂತರ ಧ್ವನಿವರ್ಧಕ ಬಳಸಬಾರದು ಎಂದು ನಿಯಮ ತಂದರು. ಈಗ ಎಲ್ಲಾ ಕಡೆ ಅಧಿಕಾರಿಗಳು ಈ ರೀತಿಯ ನಿಯಮ ಮಾಡುತ್ತಿದ್ದಾರೆ. ಸರ್ಕಾರ ಸರಿಪಡಿಸಿ ಎಂದು ಸೂಚಿಸಿದರು.
ಗೃಹ ಸಚಿವರ ಪರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ನಮ್ಮ ಸಂಸ್ಕೃತಿಗೆ ತೊಂದರೆ ಆಗಬಾರದು. ದೇಶಿಯ ಆಟಗಳಿಗೆ ಯಾವುದೇ ತೊಂದರೆ ಆಗದ ರೀತಿ ಗೃಹ ಸಚಿವರ ಜೊತೆ ಚರ್ಚಿಸಿ ನಿಯಮಗಳನ್ನು ಸರಳೀಕರಣ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಈ ವೇಳೆ ಶಾಸಕ ನೇಮಿರಾಜ್ ನಾಯ್ಕ್ ಮಾತನಾಡಿ, ಕೋಳಿಅಂಕಕ್ಕೆ ತೊಂದರೆ ಆಗುತ್ತಿರುವುದರ ಬಗ್ಗೆ ಪ್ರಸ್ತಾಪಿಸಿದರು.
ಆಗ ಮಧ್ಯ ಪ್ರವೇಶಿಸ ಮಾಡಿದ ಸುನೀಲ್ ಕುಮಾರ್, ಕೋಳಿ ಅಂಕ ಮೊದಲಿನಿಂದಲೂ ಇದೆ. ಕೋಳಿ ಅಂಕದ ಕೋಳಿ ರುಚಿ ಬಹಳ ಚೆನ್ನಾಗಿದೆ. ನೀವು ಬಂದರೆ ಆ ರುಚಿ ತೋರಿಸುತ್ತೇವೆ ಎಂದು ಡಿಕೆಶಿಗೆ ಸುನೀಲ್ ಹೇಳಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…