ರಾಜ್ಯ

ಬಹಿರಂಗ ಚರ್ಚೆಗೆ ಬನ್ನಿ : ಎಚ್‌ಡಿಕೆಗೆ ಡಿಕೆಶಿ ಬಹಿರಂಗ ಸವಾಲು

ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ವಾದ ವಿವಾದ ಇರಬೇಕು. ಹಿಟ್ ಅಂಡ್ ರನ್, ಬ್ಲ್ಯಾಕ್ಮೇಲ್ ಮಾಡುವುದಲ್ಲ. ಕುಮಾರಸ್ವಾಮಿ ನನ್ನ ವಿರುದ್ಧ ಇರುವ ದಾಖಲೆ ತಂದು ಬಹಿರಂಗ ಚರ್ಚೆಯಲ್ಲಿ ಭಾಗವಹಿಸಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಬಳಿ ಸಾಕ್ಷಿಗುಡ್ಡೆ ಇದ್ದರೆ, ಜನಕ್ಕೆ, ರಾಜ್ಯಕ್ಕೆ ಒಳ್ಳೆಯದು ಮಾಡಿದ್ದರೆ ಅದನ್ನು ದಾಖಲೆ ಸಮೇತ ಬಂದು ಹೇಳಲಿ. ಜನ ಅವರಿಗೆ ಮತ ಕೊಟ್ಟು ದೊಡ್ಡ ಹುದ್ದೆ ನೀಡಿದ್ದಾರೆ. ಸಾರ್ವಜನಿಕವಾಗಿ ಬಂದು ಉತ್ತರ ನೀಡಲಿ. ಕೇವಲ ಸುಳ್ಳು ಆರೋಪ ಮಾಡುತ್ತಾ, ಬೇರೆಯವರಿಗೆ ಹೆದರಿಸುತ್ತಾ ಹೋಗುವುದಲ್ಲ. ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೆ ವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ. ಅವರು ಸಿಎಂ ಆಗಿದ್ದಾಗ ನಾನು ಸಾತನೂರಿಗೆ ಚರ್ಚೆಗೆ ಹೋಗಲಿಲ್ಲವೇ’ ಎಂದು ಪ್ರಶ್ನಿಸಿದರು.

ಇದನ್ನು ಓದಿ: ನಾಯಕತ್ವ ಬದಲಾವಣೆ ಹೇಳಿಕೆಗೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಮುಂದುವರಿದು, ನಾನು ಏನು ಮಾಡಿದ್ದೇನೆ, ನನ್ನ ಹುಳುಕು ಏನಿದೆ ಎಂಬುದನ್ನು ನೀನು ಹೇಳು, ನಿನ್ನದು ಏನಿದೆ ಎಂದು ನಾನು ಹೇಳುತ್ತೇನೆ. ನಂತರ ಜನ ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದರು.

ಎರಡು ವರ್ಷದ ನಂತರ ಇವರು ಸರ್ಕಾರ ರಚಿಸುವುದು ಇರಲಿ, ಜೆಡಿಎಸ್ ೭-೮ ಸ್ಥಾನಗಳಿಗೆ ಕುಸಿಯುತ್ತದೆ. ಅದನ್ನು ಮೊದಲು ನೋಡಿಕೊಳ್ಳಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

7 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

7 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

7 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

8 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

8 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

8 hours ago