ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ವಾದ ವಿವಾದ ಇರಬೇಕು. ಹಿಟ್ ಅಂಡ್ ರನ್, ಬ್ಲ್ಯಾಕ್ಮೇಲ್ ಮಾಡುವುದಲ್ಲ. ಕುಮಾರಸ್ವಾಮಿ ನನ್ನ ವಿರುದ್ಧ ಇರುವ ದಾಖಲೆ ತಂದು ಬಹಿರಂಗ ಚರ್ಚೆಯಲ್ಲಿ ಭಾಗವಹಿಸಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಬಳಿ ಸಾಕ್ಷಿಗುಡ್ಡೆ ಇದ್ದರೆ, ಜನಕ್ಕೆ, ರಾಜ್ಯಕ್ಕೆ ಒಳ್ಳೆಯದು ಮಾಡಿದ್ದರೆ ಅದನ್ನು ದಾಖಲೆ ಸಮೇತ ಬಂದು ಹೇಳಲಿ. ಜನ ಅವರಿಗೆ ಮತ ಕೊಟ್ಟು ದೊಡ್ಡ ಹುದ್ದೆ ನೀಡಿದ್ದಾರೆ. ಸಾರ್ವಜನಿಕವಾಗಿ ಬಂದು ಉತ್ತರ ನೀಡಲಿ. ಕೇವಲ ಸುಳ್ಳು ಆರೋಪ ಮಾಡುತ್ತಾ, ಬೇರೆಯವರಿಗೆ ಹೆದರಿಸುತ್ತಾ ಹೋಗುವುದಲ್ಲ. ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೆ ವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ. ಅವರು ಸಿಎಂ ಆಗಿದ್ದಾಗ ನಾನು ಸಾತನೂರಿಗೆ ಚರ್ಚೆಗೆ ಹೋಗಲಿಲ್ಲವೇ’ ಎಂದು ಪ್ರಶ್ನಿಸಿದರು.
ಇದನ್ನು ಓದಿ: ನಾಯಕತ್ವ ಬದಲಾವಣೆ ಹೇಳಿಕೆಗೆ ಬದ್ಧ : ಯತೀಂದ್ರ ಸಿದ್ದರಾಮಯ್ಯ
ಮುಂದುವರಿದು, ನಾನು ಏನು ಮಾಡಿದ್ದೇನೆ, ನನ್ನ ಹುಳುಕು ಏನಿದೆ ಎಂಬುದನ್ನು ನೀನು ಹೇಳು, ನಿನ್ನದು ಏನಿದೆ ಎಂದು ನಾನು ಹೇಳುತ್ತೇನೆ. ನಂತರ ಜನ ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದರು.
ಎರಡು ವರ್ಷದ ನಂತರ ಇವರು ಸರ್ಕಾರ ರಚಿಸುವುದು ಇರಲಿ, ಜೆಡಿಎಸ್ ೭-೮ ಸ್ಥಾನಗಳಿಗೆ ಕುಸಿಯುತ್ತದೆ. ಅದನ್ನು ಮೊದಲು ನೋಡಿಕೊಳ್ಳಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…
ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…
ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…