ರಾಜ್ಯ

ಬಹಿರಂಗ ಚರ್ಚೆಗೆ ಬನ್ನಿ : ಎಚ್‌ಡಿಕೆಗೆ ಡಿಕೆಶಿ ಬಹಿರಂಗ ಸವಾಲು

ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ವಾದ ವಿವಾದ ಇರಬೇಕು. ಹಿಟ್ ಅಂಡ್ ರನ್, ಬ್ಲ್ಯಾಕ್ಮೇಲ್ ಮಾಡುವುದಲ್ಲ. ಕುಮಾರಸ್ವಾಮಿ ನನ್ನ ವಿರುದ್ಧ ಇರುವ ದಾಖಲೆ ತಂದು ಬಹಿರಂಗ ಚರ್ಚೆಯಲ್ಲಿ ಭಾಗವಹಿಸಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಬಳಿ ಸಾಕ್ಷಿಗುಡ್ಡೆ ಇದ್ದರೆ, ಜನಕ್ಕೆ, ರಾಜ್ಯಕ್ಕೆ ಒಳ್ಳೆಯದು ಮಾಡಿದ್ದರೆ ಅದನ್ನು ದಾಖಲೆ ಸಮೇತ ಬಂದು ಹೇಳಲಿ. ಜನ ಅವರಿಗೆ ಮತ ಕೊಟ್ಟು ದೊಡ್ಡ ಹುದ್ದೆ ನೀಡಿದ್ದಾರೆ. ಸಾರ್ವಜನಿಕವಾಗಿ ಬಂದು ಉತ್ತರ ನೀಡಲಿ. ಕೇವಲ ಸುಳ್ಳು ಆರೋಪ ಮಾಡುತ್ತಾ, ಬೇರೆಯವರಿಗೆ ಹೆದರಿಸುತ್ತಾ ಹೋಗುವುದಲ್ಲ. ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೆ ವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ. ಅವರು ಸಿಎಂ ಆಗಿದ್ದಾಗ ನಾನು ಸಾತನೂರಿಗೆ ಚರ್ಚೆಗೆ ಹೋಗಲಿಲ್ಲವೇ’ ಎಂದು ಪ್ರಶ್ನಿಸಿದರು.

ಇದನ್ನು ಓದಿ: ನಾಯಕತ್ವ ಬದಲಾವಣೆ ಹೇಳಿಕೆಗೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಮುಂದುವರಿದು, ನಾನು ಏನು ಮಾಡಿದ್ದೇನೆ, ನನ್ನ ಹುಳುಕು ಏನಿದೆ ಎಂಬುದನ್ನು ನೀನು ಹೇಳು, ನಿನ್ನದು ಏನಿದೆ ಎಂದು ನಾನು ಹೇಳುತ್ತೇನೆ. ನಂತರ ಜನ ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದರು.

ಎರಡು ವರ್ಷದ ನಂತರ ಇವರು ಸರ್ಕಾರ ರಚಿಸುವುದು ಇರಲಿ, ಜೆಡಿಎಸ್ ೭-೮ ಸ್ಥಾನಗಳಿಗೆ ಕುಸಿಯುತ್ತದೆ. ಅದನ್ನು ಮೊದಲು ನೋಡಿಕೊಳ್ಳಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಆಂದೋಲನ ಡೆಸ್ಕ್

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

18 mins ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

27 mins ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

28 mins ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

30 mins ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

32 mins ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

34 mins ago