Mysore
22
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಜೈಲುಗಳ ಮೇಲೆ ನಿಗಾ ವಹಿಸಲು ಕಮಾಂಡ್‌ ಸೆಂಟರ್ ಸ್ಥಾಪನೆ:‌ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚತ್ತ ರಾಜ್ಯ ಸರ್ಕಾರ, ಓರ್ವ ಜೈಲಾಧಿಕಾರಿಯನ್ನು ವರ್ಗಾವಣೆ ಮಾಡಿದ್ದು, ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಇನ್ನು ಮುಂದೆ ಜೈಲುಗಳ ಮೇಲೆ ನಿಗಾ ವಹಿಸಲು ಕಮಾಂಡ್‌ ಸೆಂಟರ್‌ಗಳನ್ನು ಸ್ಥಾಪನೆ ಮಾಡಲಾಗುವುದು. 15 ದಿನಗಳಲ್ಲಿ ಕಮಾಂಡ್‌ ಸೆಂಟರ್‌ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಇದನ್ನು ಓದಿ: ಮೈಸೂರು | ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ: ಅಧಿಕಾರಿಗಳಿಗೆ ಸಿಎಂ ಖಡಕ್‌ ಎಚ್ಚರಿಕೆ

ರಾಜಾತಿಥ್ಯದ ವಿಡಿಯೋ ವೈರಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಕಾನೂನು ವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್‌ ಪಾಟೀಲ್, ಅಮರನಾಥ ರೆಡ್ಡಿ, ರಿಷ್ಯಂತ್‌ ಅವರನ್ನು ಒಳಗೊಂಡ ನಾಲ್ವರು ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗಿದೆ. ತನಿಖೆ ಬಳಿಕ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಐದು ವರ್ಷಗಳ ನಂತರ ಜೈಲು ಅಧಿಕಾರಿಗಳ ವರ್ಗಾವಣೆ ಕಡ್ಡಾಯ ಎಂದು ಹೇಳಿದರು.

Tags:
error: Content is protected !!