ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚತ್ತ ರಾಜ್ಯ ಸರ್ಕಾರ, ಓರ್ವ ಜೈಲಾಧಿಕಾರಿಯನ್ನು ವರ್ಗಾವಣೆ ಮಾಡಿದ್ದು, ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಇನ್ನು ಮುಂದೆ ಜೈಲುಗಳ ಮೇಲೆ ನಿಗಾ ವಹಿಸಲು ಕಮಾಂಡ್ ಸೆಂಟರ್ಗಳನ್ನು ಸ್ಥಾಪನೆ ಮಾಡಲಾಗುವುದು. 15 ದಿನಗಳಲ್ಲಿ ಕಮಾಂಡ್ ಸೆಂಟರ್ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ಇದನ್ನು ಓದಿ: ಮೈಸೂರು | ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ: ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ
ರಾಜಾತಿಥ್ಯದ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಕಾನೂನು ವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ ರೆಡ್ಡಿ, ರಿಷ್ಯಂತ್ ಅವರನ್ನು ಒಳಗೊಂಡ ನಾಲ್ವರು ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗಿದೆ. ತನಿಖೆ ಬಳಿಕ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಐದು ವರ್ಷಗಳ ನಂತರ ಜೈಲು ಅಧಿಕಾರಿಗಳ ವರ್ಗಾವಣೆ ಕಡ್ಡಾಯ ಎಂದು ಹೇಳಿದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…