ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್ ಕಾರ್ಪ್ ನೆವಲ್ ಯೂನಿಟ್ನಿಂದ ಆಯ್ಕೆಯಾಗಿ ಮಹಾರಾಷ್ಟ್ರದ ನಾಗಪುರದ ಕಾಂಫ್ಟಿಯಲ್ಲಿರುವ ಎನ್ಸಿಸಿ ಆಫೀಸರ್ ಟ್ರೈನಿಂಗ್ ಅಕಾಡೆಮಿಯಲ್ಲಿ ಭಾಗವಹಿಸಿ, ಪ್ರಿ ಕಮಿಷನ್ ಕೋರ್ಸ್ ತರಬೇತಿಯನ್ನು ಯಶಸ್ವಿಯಾಗಿ ಮುಗಿಸಿ ಅಸೋಸಿಯೇಟ್ ಎನ್ಸಿಸಿ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಪ್ರಾಂಶುಪಾಲರಾದ ಸಹೋದರಿ ಮಿನಿ ಪಳ್ಳಿಪಾಡನ್ ತಿಳಿಸಿದರು.
ಈ ಕುರಿತು ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತರಬೇತಿಯಲ್ಲಿ ಭಾರತದ ಎ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸರಿಸುಮಾರು ೬೫೦ ಜನ ಶಿಕ್ಷಕರು, ಅದರಲ್ಲಿ ದಕ್ಷಿಣ ಭಾರತದ ರಾಜ್ಯಗಳಿಂದ ೨೦೦ ಜನ ಶಿಕ್ಷಕರು ಭಾಗವಹಿಸಿದ್ದರು. ಎರಡು ತಿಂಗಳ ಅವಧಿಯ ಈ ಕಠಿಣ ಸೇನಾ ತರಬೇತಿಯಲ್ಲಿ ಲಿಖಿತ ಪರೀಕ್ಷೆಗಳು, ಡಿಎಸ್ಟಿ ಡ್ರಿಲ, -ರಿಂಗ್ ಮತ್ತು ದೈಹಿಕ ತರಬೇತಿ ಪರೀಕ್ಷೆಗಳು ನಡೆದಿದ್ದು, ಎ ಪರೀಕ್ಷೆಗಳಲ್ಲಿ ಮೊದಲ ಪ್ರಯತ್ನದ ನಾರಾಯಣಸ್ವಾಮಿಯವರು ಉತ್ತೀರ್ಣರಾಗಿ, ಅತಿ ಹೆಚ್ಚು ಅಂಕಗಳನ್ನು ಗಳಿಸಿದ್ದು, ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಇದರ ಜೊತೆಗೆ ಮೇಜರ್ ಜನರಲ್ ಶರಬ್ಜಿತ್ ಸಿಂಗ್ ಬಕ್ಷಿ -ಸೇನಾ ಮೆಡಲ್ ಮತ್ತು ವಿಶಿ ಸೇನಾ ಮೆಡಲ್, ಪ್ರಮಾಣ ಪತ್ರ ಮತ್ತು ಪಾರಿತೋಷಕವನ್ನು ಪಡೆದಿರುವುದು ನಮ್ಮ ಹೆಮ್ಮೆ ಎಂದು ಹೇಳಿದರು.
ಇಡೀ ದಕ್ಷಿಣ ಭಾರತದಲ್ಲಿಯೇ ಈ ಬಾರಿ ಪದಕ ಗೆದ್ದ ಏಕೈಕ ವ್ಯಕ್ತಿ ಇವರಾಗಿದ್ದು, ಮೈಸೂರಿನ ಮಾನಸಗಂಗೋತ್ರಿಯಲ್ಲಿರುವ ೩ ಕರ್ನಾಟಕ ಎನ್ಸಿಸಿ ನೆವಲ್ ಯೂನಿಟ್ ಇತಿಹಾಸದ ಮೊದಲ ಬಾರಿಗೆ ಬೆಳ್ಳಿ ಪದಕವನ್ನು ಪಡೆದ ಕೀರ್ತಿ ನಾರಾಯಣಸ್ವಾಮಿ ಅವರದ್ದಾಗಿದೆ. ಇದೊಂದು ಅವರ ಜೀವಮಾನದ ಮತ್ತು ಐತಿಹಾಸಿಕ ಸಾಧನೆಯಾಗಿದೆ ಎಂದು ಪ್ರಶಂಸಿಸಿದರು.
ಶಾಲೆಯ ಗಣಕಯಂತ್ರ ಶಿಕ್ಷಕಿ ವಿದ್ಯಾಶ್ರೀ, ಕನ್ನಡ ಶಿಕ್ಷಕ ರಾಜೇಂದ್ರ ಮತ್ತು ಬೆಳ್ಳಿ ಪದಕ ವಿಜೇತ ನಾರಾಯಣಸ್ವಾಮಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…