ಬೆಂಗಳೂರು: ನಗುವಿನ ಒಡೆಯ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿಕೆಗೆ ಮೂರು ವರ್ಷ. ಇಂದು(ಅ.29) ಪುನೀತ್ ಅವರ ಪತ್ನಿ ಅಶ್ವಿನ್ ಪುನೀರ್ ರಾಜ್ಕುಮಾರ್ ಕುಟುಂಬದೊಂದಿಗೆ ಇಲ್ಲಿ ಕಂಠೀರವ ಸ್ಟುಡಿಯೋದರಲ್ಲಿರುವ ಪುನೀತ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು.
ಪುನೀತ್ ಮಗಳು ವಂದಿತಾ, ನಟ ರಾಘವೇಂದ್ರ ರಾಜ್ ಕುಮಾರ್ ದಂಪತಿ ಸೇರಿದಂತೆ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದರು. ಈ ವೇಳೆ ಅಪ್ಪು ಅಭಿಮಾನಿಗಳು ಸಹ ನಮನ ಸಲ್ಲಿಸಿದರು.
ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ವಂದಿತಾ ಅವರು ಪುನೀತ್ ನೆಚ್ಚಿನ ತಿಂಡಿ, ಸಿಹಿ ತಿನಿಸುಗಳನ್ನು ಎಡೆ ಇಟ್ಟರು. ಮೂರು ವರ್ಷ ಕಳೆದರು ಪುನೀತ್ ಸಮಾಧಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ಸಹ ಸಾವಿರಾರು ಅಭಿಮಾನಿಗಳು ಸಾಮಾಧಿಗೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು.
ಪುನೀತ್ ನೆನಪು ಮಾಸಲ್ಲ. ದುಃಖ ಇನ್ನೂ ಇದೆ. ಜನಗಳ ಪ್ರೀತಿ ಕಮ್ಮಿ ಆಗುತ್ತಲೇ ಇಲ್ಲ. ಅವರ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪುನೀತ್ ಗುಣವನ್ನು ನಿಮ್ಮಲ್ಲೂ ಮುಂದುವರಿಸಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಳ್ಳುತ್ತೇನೆ ಎಂದು ರಾಘವೇಂದ್ರ ರಾಜ್ ಕುಮಾರ್ ಹೇಳಿದರು.
2021ರ ಅ.29ರಂದು ಪುನೀತ್ ಅವರು ಅಕಾಲಿಕ ನಿಧನರಾಗಿದ್ದರು.
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಬಹುತೇಕ ಪ್ರದೇಶಗಳು ಬೆಟ್ಟಗುಡ್ಡ ಹಾಗೂ ಅರಣ್ಯ ಅಂಚಿನ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ…
ಹೇಮಂತ್ ಕುಮಾರ್ ಜಾತಿ, ಆದಾಯ ಪ್ರಮಾಣ ಪತ್ರಕ್ಕೂ ಅಲೆದಾಟ; ಸರತಿ ಸಾಲಿನಲ್ಲಿ ನಿಂತು ಜನರ ಗೊಣಗಾಟ ಮಂಡ್ಯ: ತಾಲ್ಲೂಕು ಕೇಂದ್ರವಾದ…
ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ; ಒಣಗುತ್ತಿರುವ ಬೆಳೆ ತಿ.ನರಸೀಪುರ: ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ…
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…