ಬೆಂಗಳೂರು: ನಗುವಿನ ಒಡೆಯ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿಕೆಗೆ ಮೂರು ವರ್ಷ. ಇಂದು(ಅ.29) ಪುನೀತ್ ಅವರ ಪತ್ನಿ ಅಶ್ವಿನ್ ಪುನೀರ್ ರಾಜ್ಕುಮಾರ್ ಕುಟುಂಬದೊಂದಿಗೆ ಇಲ್ಲಿ ಕಂಠೀರವ ಸ್ಟುಡಿಯೋದರಲ್ಲಿರುವ ಪುನೀತ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು.
ಪುನೀತ್ ಮಗಳು ವಂದಿತಾ, ನಟ ರಾಘವೇಂದ್ರ ರಾಜ್ ಕುಮಾರ್ ದಂಪತಿ ಸೇರಿದಂತೆ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದರು. ಈ ವೇಳೆ ಅಪ್ಪು ಅಭಿಮಾನಿಗಳು ಸಹ ನಮನ ಸಲ್ಲಿಸಿದರು.
ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ವಂದಿತಾ ಅವರು ಪುನೀತ್ ನೆಚ್ಚಿನ ತಿಂಡಿ, ಸಿಹಿ ತಿನಿಸುಗಳನ್ನು ಎಡೆ ಇಟ್ಟರು. ಮೂರು ವರ್ಷ ಕಳೆದರು ಪುನೀತ್ ಸಮಾಧಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ಸಹ ಸಾವಿರಾರು ಅಭಿಮಾನಿಗಳು ಸಾಮಾಧಿಗೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು.
ಪುನೀತ್ ನೆನಪು ಮಾಸಲ್ಲ. ದುಃಖ ಇನ್ನೂ ಇದೆ. ಜನಗಳ ಪ್ರೀತಿ ಕಮ್ಮಿ ಆಗುತ್ತಲೇ ಇಲ್ಲ. ಅವರ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪುನೀತ್ ಗುಣವನ್ನು ನಿಮ್ಮಲ್ಲೂ ಮುಂದುವರಿಸಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಳ್ಳುತ್ತೇನೆ ಎಂದು ರಾಘವೇಂದ್ರ ರಾಜ್ ಕುಮಾರ್ ಹೇಳಿದರು.
2021ರ ಅ.29ರಂದು ಪುನೀತ್ ಅವರು ಅಕಾಲಿಕ ನಿಧನರಾಗಿದ್ದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…